ಉಡುಪಿ: ಪರೀಕ್ಷೆ ಬರೆಯಲು ಹಿಜಾಬ್‌ಗಾಗಿ ಪಟ್ಟು, ಅವಕಾಶ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸಾದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಆರಂಭವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ಪಟ್ಟು ಹಿಡಿದ ಉಡುಪಿಯ ಇಬ್ಬರು ಹಿಜಾಬ್ ಹೋರಾಟಗಾರ್ತಿಯರಿಗೆ ಅವಕಾಶ ನಿರಾಕರಿಸಿದ ಕಾರಣ ಪರೀಕ್ಷೆ ಬರೆಯದೆ ವಾಪಸ್ಸಾಗಿದ್ದಾರೆ.

ಉಡುಪಿಯಲ್ಲಿ ಆರು ಮಂದಿ ಹಿಜಾಬ್ ಹೋರಾಟಗಾರ್ತಿಯರ ಪೈಕಿ ಆಲಿಯಾ ಅಸ್ಸಾದಿ ಮತ್ತು ರೇಶಮ್ಎಂಬ ಇಬ್ಬರು ವಿದ್ಯಾರ್ಥಿನಿಯರು ಇಂದು, ಶುಕ್ರವಾರ ಪರೀಕ್ಷೆ ಬರೆಯಬೇಕಿತ್ತು. ಅವರು ನಿನ್ನೆವರೆಗೂ ಪ್ರವೇಶ ಪತ್ರ ಪಡೆದಿರಲಿಲ್ಲ. ಇಂದು ಪರೀಕ್ಷೆ ಆರಂಭವಾಗುವ ಕೆಲವೇ ಕ್ಷಣಗಳ ಮೊದಲು ಪ್ರವೇಶ ಪತ್ರ ಪಡೆದು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾರೆ.

ಆದರೆ ರಾಜ್ಯ ಸರ್ಕಾರದ ಹಿಜಾಬ್‌ ನಿಷೇಧವನ್ನು ಎತ್ತಿಹಿಡಿಯುವ ನ್ಯಾಯಾಲಯದ ಆದೇಶದ ಕಾರಣದಿಂದ ಅವರಿಗೆ ಯಾವುದೇ ವಿನಾಯಿತಿ ನೀಡಿಲ್ಲ. ಆದೇಶವಿರುವುದರಿಂದ ಪರೀಕ್ಷಾ ಕೇಂದ್ರದಲ್ಲಿ ಅವಕಾಶ ನಿರಾಕರಿಸಲಾಯಿತು ಹಾಗೂ ಹಿಜಾಬ್‌ ತೆಗೆಯಲು ಒಪ್ಪದ ಅವರು ಪರೀಕ್ಷೆಗೆ ಹಾಜರಾಗದೆ ಮನೆಗೆ ವಾಪಸ್ಸಾಗಿದ್ದಾರೆ ಎಂದು ವರದಿಯಾಗಿದೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದಿನಿಂದ ಎರಡನೇ ಪೂರ್ವ ವಿಶ್ವವಿದ್ಯಾಲಯ ಪರೀಕ್ಷೆಯನ್ನು (12 ನೇ ತರಗತಿ ಬೋರ್ಡ್ ಪರೀಕ್ಷೆಗಳು) ನಡೆಸುತ್ತಿದೆ. ಶಿಕ್ಷಣ ಇಲಾಖೆಯ ಪ್ರಕಾರ, 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement