ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ಮಹಾರಾಷ್ಟ್ರದಲ್ಲಿ ಪೊಲೀಸರ ಬಲೆಗೆ ಬಿದ್ದ ಪ್ರಮುಖ ಆರೋಪಿ

ಕಲಬುರಗಿ: ಪಿಎಸ್‌ಐ ನೇಮಕದ ಪರೀಕ್ಷೆ ಹಗರಣದಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಆರೋಪಿ ಹಾಗೂ ಪ್ರಕರಣದ ಕಿಂಗ್ ‌ಪಿನ್ ಎನ್ನಲಾಗುತ್ತಿರುವ ಅಫಜಲಪುರದ ಅರ್.ಡಿ.ಪಾಟೀಲ್ ಎಂಬಾತನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ನಿನ್ನೆ ಶುಕ್ರವಾರವಷ್ಟೇ ಅವರ ಸಹೋದರ ಹಾಗೂ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್ ಎಂಬುವರನ್ನು ಬಂಧಿಸಲಾಗಿತ್ತು.
ಇಂದು ಶನಿವಾರ ಆರ್.ಡಿ.ಪಾಟೀಲನನ್ನು ಪೊಲೀಸರು ಮಹಾರಾಷ್ಟ್ರದ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರ್‌.ಡಿ.ಪಾಟೀಲ ತಲೆಮರೆಸಿಕೊಂಡಿದ್ದ, ಆರ್.ಡಿ.ಪಾಟೀ,ನನ್ನು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದುಕೊಂಡ ಸಿಐಡಿ ಅಧಿಕಾರಿಗಳು ಆತನನ್ನು ಕಲಬುರಗಿ ಕಡೆಗೆ ಕರೆದುಕೊಂಡು ಬರುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ನಿಮ್ಮ ಕಾಮೆಂಟ್ ಬರೆಯಿರಿ

advertisement