
ಚಿತ್ರದುರ್ಗ: ಬೊಲೆರೊ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಬೋಕಿಕೆರೆ ಗೇಟ್ ಬಳಿ ಭಾನುವಾರ ಮುಂಜಾನೆ ನಡೆದ ಬಗ್ಗೆ ವರದಿಯಾಗಿದೆ.

ಮೃತರನ್ನು ಹೊನ್ನಾವರ ನಿವಾಸಿಗಳಾದ ಶ್ರೀಧರ ನಾಯ್ಕ್, ಜೀವನಕುಮಾರ್, ವಿನಾಯಕ ಎಂದು ಗುರುತಿಸಲಾಗಿದೆ. ಎಲ್ಲರೂ ತುಮಕೂರು ಗ್ಯಾಸ್ ಪೈಪ್ ಲೈನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಮೂವರು ಕಾರ್ಮಿಕರು ಹೊನ್ನಾವರದಿಂದ ತುಮಕೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬೋಕಿಕೆರೆ ಗೇಟ್ ಬಳಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಹುಣಸೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ