ಬೆಂಗಳೂರು: ರಾಜಧಾನಿಯಲ್ಲಿ ಹತ್ತು ಶ್ವಾನಗಳಿಗೆ ವಿಷವಿಟ್ಟು ಸಾಯಿಸಿದ ಅಮಾನವೀಯ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ಬಡೆದ ಬಗ್ಗೆ ವರದಿಯಾಗಿದೆ.
ರಾತ್ರಿ ಹೊತ್ತು ನಾಯಿಗಳು ಬೊಗಳುತ್ತವೆ ಎಂದು ಅಪಾರ್ಟ್ ಮೆಂಟ್ ಬಳಿ ಇದ್ದ ಶ್ವಾನಗಳಿಗೆ ದುಷ್ಕರ್ಮಿಗಳು ವಿಷವುಣಿಸಿದ್ದಾರೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಪ್ರಾಣಿಗಳಿಗೆ ವಿಷ ಹಾಕಿ ಕೊಲ್ಲುವುದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972 ಅಡಿಯಲ್ಲಿ ಅಪರಾಧ. ನಾಯಿಗಳಿಗೆ ಆಹಾರದಲ್ಲಿ ವಿಷ ಹಾಕುವುದರಿಂದ ಇತರ ಪ್ರಾಣಿಗಳೂ ಸಾಯುವ ಸಾಧ್ಯತೆ ಇದೆ. ಎಲ್ಲಾ ಪ್ರಾಣಿಗಳಿಗೂ ಬದುಕುವ ಹಕ್ಕಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದೇವೆ’ ಎಂದು ಸಾಮಾಜಿಕ ಹೋರಾಟಗಾರ ಅರುಣ್ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ