ಗುವಾಹತಿ: ಗುಜರಾತ್ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಅಸ್ಸಾಂನ ಕೊಕ್ರಜಾರ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದಕ್ಕಾಗಿ ಶಾಸಕ ಮೇವಾನಿಯನ್ನು ಏಪ್ರಿಲ್ 20 ರಂದು ಬಂಧಿಸಲಾಗಿತ್ತು.
ಮೇವಾನಿ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಭಾನುವಾರ ಕೊನೆಗೊಂಡಿತು, ನಂತರ ಅವರನ್ನು ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಐಪಿಸಿ ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ ನಂತರ ಕಾಂಗ್ರೆಸ್ ಬೆಂಬಲಿತ ಸ್ವತಂತ್ರ ಶಾಸಕ ಮೇವಾನಿ ಅವರನ್ನು ಗುಜರಾತ್ನ ಪಾಲನ್ಪುರ ಪಟ್ಟಣದಿಂದ ಏಪ್ರಿಲ್ 20 ರ ರಾತ್ರಿ ಅಸ್ಸಾಂ ಪೊಲೀಸರ ತಂಡ ಬಂಧಿಸಿತು.
ಎಫ್ಐಆರ್ನ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು “ಗೋಡ್ಸೆಯನ್ನು ದೇವರೆಂದು ಪರಿಗಣಿಸಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದರು.
ಗುರುವಾರ ಬೆಳಗ್ಗೆ ಗುಜರಾತ್ನಿಂದ ಗುವಾಹತಿಗೆ ಮೆವಾನಿ ಅವರನ್ನು ವಿಮಾನದ ಮೂಲಕ ಕೊಕ್ರಜಾರ್ಗೆ ಕರೆದೊಯ್ಯಲಾಯಿತು, ಅಲ್ಲಿ ಅವರನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು, ಅದು ಅವರನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿತ್ತು.
ಅಸ್ಸಾಂ ಬಿಜೆಪಿ ಮುಖಂಡ ಅರುಪ್ ಕುಮಾರ್ ಡೇ ಅವರು ನೀಡಿದ ದೂರಿನ ನಂತರ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ