ರಾಮನಗರ: ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ

ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲೇ ಇಬ್ಬರು ಸಾವಿಗೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ಸೋಮವಾರ ಬೆಳಗ್ಗೆ 6ರ ಸುಮಾರಿಗೆ ಸಂಭವಿಸಿದೆ.

ಮೃತರನ್ನುಸುಂದರೇಶ (49) ಮತ್ತು ತನ್ಮಯ್ (9) ಎಂದು ಗುರುತಿಸಲಾಗಿದೆ. ಅಲ್ಲದೆ ಶೀಲ, ಗಾನವಿ, ಸಾನವಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋದವರು ವಾಪಸ್​ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ಬರುತ್ತಿರಿವಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ನಿಮ್ಮ ಕಾಮೆಂಟ್ ಬರೆಯಿರಿ

advertisement