ಓದು ಎಂದು ಬುದ್ಧಿಮಾತು ಹೇಳಿದ್ದಕ್ಕೆ ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಹಾವೇರಿ: ಓದು ಎಂದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ತಾಲೂಕಿನ ಗುತ್ತಲ ಸಮೀಪದ ಹೊಸಮೇಲ್ಮುರಿಯದಲ್ಲಿ ಎಂಬಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ.

ಮೃತ ವಿದ್ಯಾರ್ಥಿಯನ್ನು ಫಕ್ಕಿರೇಶ ಅರಳಿ (18) ಎಂದು ಗುರುತಿಸಲಾಗಿದೆ. ಗುರುವಾರ ಪರೀಕ್ಷೆ ಬರೆದಿದ್ದ ಈತ ಆ ದಿನ ಓದದೇ ಕಾಲಹರಣ ಮಾಡುತ್ತಿದ್ದುದರಿಂದ ಓದುವಂತೆ ಪೋಷಕರು ಆತನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿ ಹೊಲದಲ್ಲಿನ ರೇಷ್ಮೆ ಮನೆಯಲ್ಲಿ ಶುಕ್ರವಾರ ನೇಣಿಗೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಗುತ್ತಲ ಠಾಣೆಯ ಪಿಎಸ್ಐ ಜಗದೀಶ್ ಜಿ. ಹಾಗೂ ಸಿಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement