ಹಾವೇರಿ: ಎರಡು ಕಾರುಗಳ ಡಿಕ್ಕಿ – ನಾಲ್ವರು ಸಾವು, ಮೂವರಿಗೆ ಗಾಯ

ಹಾವೇರಿ: ಕಾರೊಂದರ ಟೈರ್ ಸಿಡಿದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ಮೃತರನ್ನು ಗುಜರಾತ್ ಮೂಲದ ದಿನೇಶ್ ಬಾಯಿ(38), ಲತೀಶ್ ಬಾಯಿ(37), ಸುರೇಶ್ ಬಾಯಿ(39) ಹಾಗೂ ಕೇರಳ ಮೂಲದ ಸಾಹಲ್(37) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೇರಳ ಮೂಲದ ದಾನೇಶ್, ಜೈನಾಬಿ ಹಾಗೂ ಗುಜರಾತ್ ಮೂಲದ ಅಶ್ವಿನ್ ಎಂದು ಹೇಳಲಾಗಿದೆ.ಗಂಭೀರವಾಗಿ ಗಾಯಗೊಂಡ ಇಬ್ಬರಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

ಎರಡು ಕಾರುಗಳ ನಡುವಿನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯ್ ಕುಮಾರ್, ಸಿಪಿಐ ಮುತ್ತಪ್ಪ ಗೌಡಪ್ಪಗೌಡರ್ ಹಾಗೂ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಹೆಚ್ಚಿನ ವಿವರ ತಿಳಿದುಬರಬೇಕಿದೆ. ಅತಿಯಾದ ವೇಗದಿಂದ ಸಾಗುತ್ತಿದ್ದಾಗ ಕಾರಿನ ಟೈರ್ ಸಿಡಿದಿದ್ದೇ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement