ಹುಬ್ಬಳ್ಳಿ ಗಲಭೆ ಆರೋಪಿ ಜೈಲಿನೊಳಗೆ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಮೊಹಮ್ಮದ್ ಆರಿಫ್ ಜೈಲಿನೊಳಗೆ ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.

ಆತನನ್ನುಕಿಮ್ಸ್‌   ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ ಎಂದು ಹೇಳಲಾಗಿದೆ. ಒಂದು ವಾರದ ಹಿಂದೆ, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿತ್ತು ಹಾಗೂ ಹಳೆಹುಬ್ಬಳ್ಳಿ ಠಾಣೆಯಲ್ಲಿ ಇರಿಸಲಾಗಿತ್ತು. ತನಗೆ ಗಾಯವಾಗಿದೆ, ಟರ್ಪಂಟೈನ್‌ ತಂದು ಕೊಡಿ ಎಂದು ಈತ ಹೇಳಿದ್ದು, ಟರ್ಪಂಟೈನ್‌ ತಂದುಕೊಟಿದ್ದಾರೆ. ಆದರೆ ನಂತರ ಈತ ಅದನ್ನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ಏಪ್ರಿಲ್ 16 ರಂದು ಮಧ್ಯರಾತ್ರಿ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಸುಮಾರು 1000 ಜನರ ಗುಂಪು ದಾಳಿ ನಡೆಸಲು ಯತ್ನಿಸಿತ್ತು. ಗುಂಪು ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ 12 ಪೊಲೀಸರು ಗಾಯಗೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement