250 ವರ್ಷಗಳಷ್ಟು ಹಳೆಯ ದೇವಸ್ಥಾನ ಸ್ಥಳಾಂತರಿಸಲು ರೈಲ್ವೆ ನೋಟಿಸ್ ನೀಡಿದ ನಂತರ ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ಲಕ್ನೋ: ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದ ಆವರಣದಿಂದ 250 ವರ್ಷಗಳಷ್ಟು ಹಳೆಯದಾದ ಚಾಮುಂಡಾ ದೇವಿ ದೇವಸ್ಥಾನವನ್ನು ಸ್ಥಳಾಂತರಿಸುವಂತೆ ರೈಲ್ವೆ ಇಲಾಖೆ ನೋಟಿಸ್ ನೀಡಿದ ನಂತರ ರೈಲ್ವೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿಂದೂ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.
ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್‌ಎಂ) ಆನಂದ್ ಸ್ವರೂಪ್ ಅವರು ಏಪ್ರಿಲ್ 20 ರಂದು ರೈಲ್ವೆ ನಿಲ್ದಾಣದಿಂದ ದೇವಸ್ಥಾನವನ್ನು ಸ್ಥಳಾಂತರಿಸುವಂತೆ ದೇವಾಲಯದ ಅಧಿಕಾರಿಗಳಿಗೆ ನೋಟಿಸ್ ನೀಡಿದ್ದರು.
ಪ್ರಯಾಣಿಕರು ಅನುಭವಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ ದೇವಸ್ಥಾನ ಸ್ಥಳಾಂತರಿಸಬೇಕು ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ. ದೇವಸ್ಥಾನವನ್ನು ತೆಗೆಯದಿದ್ದರೆ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ಸ್ಥಳಾಂತರಿಸಬೇಕಾಗುತ್ತದೆ ಎಂದು ಅದು ಹೇಳಿದೆ. ಅತಿಕ್ರಮಣ ವಿರೋಧಿ ಆಂದೋಲನದ ಭಾಗವಾಗಿ ಸಮೀಪದ ಮಸೀದಿ ಮತ್ತು ದರ್ಗಾಕ್ಕೂ ಇದೇ ರೀತಿಯ ಸೂಚನೆಗಳನ್ನು ನೀಡಲಾಗಿದೆ.

ದೇವಸ್ಥಾನದ ಆಡಳಿತಕ್ಕೆ ನೋಟಿಸ್ ನೀಡಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಶುಕ್ರವಾರ ಉತ್ತರ ಮಧ್ಯ ರೈಲ್ವೆಯ ಆಗ್ರಾ ವಿಭಾಗದ ಡಿಆರ್‌ಎಂ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ತಮ್ಮದು 300 ವರ್ಷಗಳಷ್ಟು ಪುರಾತನವಾದ ದೇವಾಲಯವಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ದೇವಾಲಯದ ಅರ್ಚಕ ಮಹಂತ್ ವೀರೇಂದ್ರ ಆನಂದ್ ಅವರ ಪ್ರಕಾರ, ಅವರು ತಮ್ಮ ಬಾಲ್ಯದಿಂದಲೂ ದೇವಾಲಯವನ್ನು ನೋಡಿಕೊಳ್ಳುತ್ತಿದ್ದರು ಮತ್ತು ಅವರ ಪೂರ್ವಜರು ಸಹ ಅಲ್ಲಿ ಸೇವೆ ಸಲ್ಲಿಸಿದ್ದರು.
ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಅತಿಕ್ರಮಣಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಉತ್ತರ ಮಧ್ಯ ರೈಲ್ವೆಯ ಆಗ್ರಾ ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಶಸ್ತಿ ಶ್ರೀವಾಸ್ತವ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸರಿಯಾಗಿ ಅಡುಗೆ ಮಾಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿಗೆ ಬರ್ಬರವಾಗಿ ಥಳಿಸಿದ ಮೊಮ್ಮಗ-ಆತನ ಪತ್ನಿ : ವೀಡಿಯೊ ವೈರಲ್‌, ಇಬ್ಬರ ಬಂಧನ

ಸುಪ್ರೀಂಕೋರ್ಟ್‌ ಆದೇಶಕ್ಕೆ ಬದ್ಧವಾಗಿ ಅತಿಕ್ರಮಣ ತಡೆ ಅಭಿಯಾನದ ಅಂಗವಾಗಿ ದೇವಸ್ಥಾನ, ದರ್ಗಾ ಮತ್ತು ಮಸೀದಿಗೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ನಾವು ಆಗ್ರಾ ಕ್ಯಾಂಟ್ ರೈಲ್ವೇ ನಿಲ್ದಾಣದ ಆವರಣದಲ್ಲಿರುವ ರೈಲ್ವೆ ಭೂಮಿಯಲ್ಲಿರುವ ಮಸೀದಿ ಮತ್ತು ದರ್ಗಾಕ್ಕೂ ನೋಟಿಸ್ ನೀಡಿದ್ದೇವೆ. ಮತ್ತು ಮೇ 13 ರೊಳಗೆ ತಮ್ಮ ದಾಖಲೆಗಳನ್ನು ಸಲ್ಲಿಸಲು ಅವರಿಗೆ ಸಮಯ ನೀಡಲಾಗಿದೆ ಎಂದು ಅವರು ಹೇಳಿದರು.
ಹಿಂದೂ ಜಾಗರಣ್ ಮಂಚ್ ದೇವಾಲಯವನ್ನು ತೆಗೆದುಹಾಕಲು ದೇವಾಲಯದ ಆಡಳಿತ ಮಂಡಳಿಗೆ ನೋಟಿಸ್ ನೀಡಿದ್ದಕ್ಕಾಗಿ ಆಗ್ರಾದ ವಿಭಾಗೀಯ ರೈಲ್ವೇ ಮ್ಯಾನೇಜರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿತು.

ಏತನ್ಮಧ್ಯೆ, ದರ್ಗಾದ ಉಸ್ತುವಾರಿ ತುಫೈಲ್ ಅದರ ಇತಿಹಾಸ ಮತ್ತು ಸ್ಮಾರಕದೊಂದಿಗೆ ಅವರ ಕುಟುಂಬದ ಸಂಬಂಧ ಹೇಳಿದ್ದಾರೆ ಮತ್ತು ಕಳೆದ 25 ವರ್ಷಗಳಿಂದ ದರ್ಗಾಕ್ಕೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ನನ್ನ ಅಜ್ಜ 1920ರಲ್ಲಿ ಆಗ್ರಾಕ್ಕೆ ಬಂದರು. ಅಂದಿನಿಂದ ನನ್ನ ಕುಟುಂಬ ಇಲ್ಲಿಗೆ ಬರುತ್ತಿದೆ. ಇದ್ದಕ್ಕಿದ್ದಂತೆ, ರೈಲ್ವೆ ನಮಗೆ ನೋಟಿಸ್ ಕಳುಹಿಸಿದೆ. ಇದು ಅನ್ಯಾಯವಾಗಿದೆ ಮತ್ತು ನಾವು ಇದರ ವಿರುದ್ಧ ಹೋರಾಡುತ್ತೇವೆ ಎಂದು ತುಫೈಲ್ ಹೇಳಿದರು.
ರೈಲ್ವೆ ಅಧಿಕಾರಿಗಳು ದರ್ಗಾ ಗೋಡೆಯ ಮೇಲೆ ಎಲ್ಲರಿಗೂ ಕಾಣುವಂತೆ ನೋಟೀಸ್ ಅಂಟಿಸಿದ್ದಾರೆ. ಪ್ರತಿವಾದಿಗಳು ವಿಚಾರಣೆಗಾಗಿ ಮೇ 13 ರಂದು ರೈಲ್ವೆ ನ್ಯಾಯಾಲಯಕ್ಕೆ ಹೋಗಲಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಹಣವಿಲ್ಲ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement