ದೆಹಲಿ: ಮನೆ ಎದುರು ನಿಂತಿದ್ದ ಬಿಜೆಪಿ ಮುಖಂಡನ ಮೇಲೆ ಗುಂಡು ಹಾರಿಸಿ ಹತ್ಯೆ

ನವದೆಹಲಿ: ಪೂರ್ವ ದೆಹಲಿಯಲ್ಲಿ ಬುಧವಾರ ರಾತ್ರಿ ಬಿಜೆಪಿ ಮುಖಂಡರೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಜಿತು ಚೌಧರಿ (42 ವರ್ಷ) ಎಂದು ಗುರುತಿಸಲಾಗಿದೆ. ಗಾಜಿಪುರ ಪ್ರದೇಶದ ಮಯೂರ್ ವಿಹಾರದ ಮೂರನೇ ಹಂತದಲ್ಲಿರುವ ಜಿತು ಅವರು ಮನೆಯ ಹೊರಗೆ ನಿಂತಿದ್ದಾಗ ಬೈಕ್‌ನಲ್ಲಿ ಬಂದವರು ಗುಂಡಿನ ದಾಳಿ ನಡೆಸಿದ್ದಾರೆ ಎಂದು … Continued

ಬೆಂಗಳೂರು ಮೆಟ್ರೋ ಕಾಮಗಾರಿ: 1342 ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡನೇ ಹಂತದ ಕಸ್ತೂರಿ ನಗರ ಮತ್ತು ಕೆಂಪಾಪುರ ಹೊರವರ್ತುಲ ರಸ್ತೆ ಹಾಗೂ ವೆಲ್ಲಾರ ಜಂಕ್ಷನ್‌ನಿಂದ ರಾಷ್ಟ್ರೀಯ ಮಿಲಿಟರಿ ಶಾಲೆಯ ನಡುವಿನ ನಮ್ಮ ಮೆಟ್ರೊ ರೈಲು ಮಾರ್ಗದಲ್ಲಿ ಕಾಮಗಾರಿ ನಡೆಸಲು ಒಟ್ಟು 1,342 ಮರಗಳನ್ನು ಕಡಿಯಲು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್‌) ಬುಧವಾರ ಕರ್ನಾಟಕ … Continued

ಪ್ರಧಾನಿ ಮೋದಿ ಗುರಿಯಾಗಿಸಿ ಆಕ್ಷೇಪಾರ್ಹ ಟ್ವೀಟ್: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬಂಧಿಸಿದ ಅಸ್ಸಾಂ ಪೊಲೀಸರು

ಗುಜರಾತ್‌ನ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಅವರ ತಂಡ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ. ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ದಲಿತ ನಾಯಕ ಮತ್ತು ರಾಜಕೀಯ ಪಕ್ಷ ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ಸಂಚಾಲಕ, ಗುಜರಾತ್‌ನ ಪಾಲನ್‌ಪುರದ ಸರ್ಕ್ಯೂಟ್ ಹೌಸ್‌ನಿಂದ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ … Continued

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ: ಯೋಜನೆ ಪರಿಣಾಮದ ಮೌಲ್ಯಮಾಪನಕ್ಕೂ ಮೊದಲು ಹುಲಿ ಸಂರಕ್ಷಣಾ ಪ್ರಾಧಿಕಾರದ ಅನುಮತಿ ಪಡೆಯಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಹುಬ್ಬಳ್ಳಿ – ಅಂಕೋಲಾ ನಡುವಿನ ರೈಲು ಮಾರ್ಗದಿಂದ ವನ್ಯಜೀವಿಗಳ ಮೇಲೆ ದುಷ್ಪರಿಣಾಮ ಉಂಟಾಗುವುದರ ಕುರಿತು ಸಮೀಕ್ಷೆ ಹಾಗೂ ಮೌಲ್ಯಮಾಪನಕ್ಕೂ ಮುನ್ನ ಅರಣ್ಯ ಸಂರಕ್ಷಣಾ ಕಾಯಿದೆ ಅಡಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದಿಂದ ಅಗತ್ಯ ಅನುಮತಿ ಪಡೆಯುವಂತೆ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಬುಧವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued

ತುಳಸಿ-ಭಾಯಿ’: ಇದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಡಾ ಟೆಡ್ರೊಸ್ ಘೆಬ್ರೆಯೆಸಸ್‌ಗೆ ಪ್ರಧಾನಿ ಮೋದಿ ನೀಡಿದ ಗುಜರಾತಿ ಹೆಸರು..!

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೋರಿಕೆಯ ಮೇರೆಗೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಘೆಬ್ರೆಯೆಸಸ್ ಅವರಿಗೆ ಬುಧವಾರ ‘ತುಳಸಿ-ಭಾಯ್’ ಎಂಬ ಹೊಸ ಹೆಸರನ್ನು ನೀಡಿದ್ದಾರೆ. ಇಲ್ಲಿ ನಡೆದ ಶೃಂಗಸಭೆಯಲ್ಲಿ ಮೋದಿ ಅವರಿಗೆ ಗುಜರಾತಿ ಹೆಸರನ್ನು ನೀಡಿದಾಗ ಡಾ ಘೆಬ್ರೆಯೆಸಸ್ ನಗುವಿನ ಮೂಲಕ ಪ್ರತಿಕ್ರಿಯಿಸಿದರು. ತುಳಸಿ ಸಸ್ಯ (‘ಪವಿತ್ರ ತುಳಸಿ’ ಅಥವಾ … Continued

ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿ ಸರ್ಮತ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದ ರಷ್ಯಾ.. ಇದು ಭೂಮಿ ಮೇಲಿನ ಯಾವುದೇ ಮೂಲೆಯಲ್ಲಿದ್ದ ಗುರಿಯನ್ನೂ ಹಿಟ್‌ ಮಾಡಬಹುದೆಂದ ಅಧ್ಯಕ್ಷ ಪುತಿನ್‌…ವೀಕ್ಷಿಸಿ

ಮಾಸ್ಕೋ: ರಷ್ಯಾವು ಸರ್ಮತ್ ಖಂಡಾಂತರ ಕ್ಷಿಪಣಿಯನ್ನು ರಷ್ಯಾ ಯಶಸ್ವಿಯಾಗಿ ಪರೀಕ್ಷಿಸಿದ್ದು, ಪರಮಾಣು ಶಸ್ತ್ರಾಸ್ತ್ರ ಹೊತ್ತೊಯ್ಯುವ ಸಾಮರ್ಥ್ಯವಿರುವ ಕ್ಷಿಪಣಿಯು ಕ್ರೆಮ್ಲಿನ್‌ನ ಶತ್ರುಗಳನ್ನು ಎರಡು ಬಾರಿ ಯೋಚಿಸುವಂತೆ ಮಾಡುತ್ತದೆ” ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹೇಳಿದ್ದಾರೆ. ಪಾಶ್ಚಿಮಾತ್ಯ ವಿಶ್ಲೇಷಕರಿಂದ ಸೈತಾನ್ 2 ಎಂದು ಕರೆಯಲ್ಪಡುವ ಸರ್ಮತ್ ರಷ್ಯಾದ ಮುಂದಿನ ಪೀಳಿಗೆಯ ಕ್ಷಿಪಣಿಗಳಲ್ಲಿ ಒಂದಾಗಿದೆ, ಇದನ್ನು ಪುತಿನ್ ಅವರು … Continued

ಸ್ನಾತಕೋತ್ತರ ಪದವಿಗಳಿಗೆ ಜಿಯೋ ಇನ್‌ಸ್ಟಿಟ್ಯೂಟ್‌ನಿಂದ ಪ್ರವೇಶಾತಿ ಆರಂಭ

ಮುಂಬೈ: ಕೃತಕ ಬುದ್ಧಿಮತ್ತೆ ಮತ್ತು ಮಾರುಕಟ್ಟೆ ಸಂವಹನ ಈ ಹಿಂದೆಂದಿಗಿಂತಲೂ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತಿವೆ. ಡಿಜಿಟಲ್ ಜಗತ್ತಿನಲ್ಲಿ ದೂರ ಸಂವಹನದಿಂದ ಹಿಡಿದು ಸಾಮಾಜಿಕ ಮಾಧ್ಯಮ, ಇಮೇಲ್, ಮೆಸೇಜಿಂಗ್, ಇಂಟರ್ನೆಟ್ ಸರ್ಚ್, ಸ್ಮಾರ್ಟ್ ಗ್ಯಾಜೆಟ್‌ಗಳು, ಬ್ಯಾಂಕಿಂಗ್, ಮನರಂಜನೆಯಿಂದ ಶಾಪಿಂಗ್‌ವರೆಗೆ ಇವು ಬಳಕೆಯಾಗುತ್ತಿವೆ. ಕೃತಕ ಬುದ್ಧಿಮತ್ತೆ (ಎಐ) ಮತ್ತು ಡೇಟಾ ವಿಜ್ಞಾನ ಹಾಗೂ ಡಿಜಿಟಲ್ ಮಾಧ್ಯಮ … Continued

ಸ್ವೀಕರಿಸಿದ ವಿದೇಶಿ ಉಡುಗೊರೆಗಳ ವಿವರಗಳನ್ನು ಪ್ರಕಟಿಸಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಇಸ್ಲಾಮಾಬಾದ್ ಹೈಕೋರ್ಟ್

ಇಸ್ಲಾಮಾಬಾದ್: ವಿದೇಶಿ ಭೇಟಿಗಳ ಸಮಯದಲ್ಲಿ ಪಡೆದ ದೇಶದಲ್ಲಿ ಠೇವಣಿ ಮಾಡಬೇಕಾದ ಉಡುಗೊರೆಗಳನ್ನು (ತೋಷಕಾನಾ ಉಡುಗೊರೆಗಳು) ಆರ್ಥಿಕ ಲಾಭಕ್ಕಾಗಿ ಮಾರಾಟ ಮಾಡಿದ್ದಾರೆಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಆರೋಪದ ನಡುವೆ, ಇಸ್ಲಾಮಾಬಾದ್ ಹೈಕೋರ್ಟ್ ಬುಧವಾರ ಅವರು ಅಧಿಕಾರ ವಹಿಸಿಕೊಂಡ ಆಗಸ್ಟ್ 2018 ರಿಂದ ಖಾನ್ ಅವರಿಗೆ ನೀಡಿದ ಉಡುಗೊರೆಗಳ ಸಾರ್ವಜನಿಕ ವಿವರಗಳನ್ನು ನೀಡುವಂತೆ ಸರ್ಕಾರಕ್ಕೆ … Continued

ಅವಿವಾಹಿತೆಯೊಂದಿಗೆ ವಿವಾಹಿತ ಪುರುಷ ಪಲಾಯನ; ಪೊಲೀಸ್ ಹುಡುಕಾಟದ ವೆಚ್ಚದ 50%ರಷ್ಟು ಪಾವತಿಸಲು ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಯುವತಿಯನ್ನು ಪುಸಲಾಯಿಸಿ ಆಕೆಯೊಂದಿಗೆ ಪರಾರಿಯಾಗಿದ್ದ ವಿವಾಹಿತನೋರ್ವನಿಗೆ ಆಕೆಯನ್ನು ಹುಡುಕಲು ಸರ್ಕಾರ ಭರಿಸಿದ ವೆಚ್ಚದ ಅರ್ಧ ಭಾಗದಷ್ಟು ನೀಡುವಂತೆ ಗುಜರಾತ್ ಹೈಕೋರ್ಟ್ ಆದೇಶಿಸಿದೆ. ಏಳು ತಿಂಗಳ ಹಿಂದೆ ಆರೋಪಿ ರಘಭಾಯ್​ ಪರ್ಮಾರ್​ ಜೊತೆ 20 ವರ್ಷದ ಯುವತಿ ಪರಾರಿಯಾಗಿದ್ದಳು. ಮಗಳ ಪತ್ತೆಗಾಗಿ ಯುವತಿ ಪೋಷಕರು ಹೈಕೋರ್ಟ್​ ಮೊರೆ ಹೋಗಿದ್ದರು. ಬಳಿಕ ಕೋರ್ಟ್​ ಪೊಲೀಸರಿಗೆ ಆದೇಶ ನೀಡಿದ್ದ … Continued

3 ತಿಂಗಳಲ್ಲಿ ಇದೇ ಮೊದಲ ಬಾರಿಗೆ 1 ದಾಟಿದ ಭಾರತದ ಕೋವಿಡ್‌-19 ಆರ್-ಮೌಲ್ಯ: ಸಂಶೋಧಕರು

ನವದೆಹಲಿ: ಸೋಂಕು ಎಷ್ಟು ವೇಗವಾಗಿ ಹರಡುತ್ತಿದೆ ಎಂಬುದರ ಸೂಚಕವಾದ ಕೋವಿಡ್‌ಗಾಗಿ ಪರಿಣಾಮಕಾರಿ ಸಂತಾನೋತ್ಪತ್ತಿ ಸಂಖ್ಯೆ (R-ಮೌಲ್ಯ) ಜನವರಿಯಿಂದ ಮೊದಲ ಬಾರಿಗೆ ಒಂದಕ್ಕಿಂತ ಹೆಚ್ಚಿದೆ ಎಂದು ಚೆನ್ನೈನ ಇನ್‌ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸ್‌ನ ಸಂಶೋಧಕರು ಅಂದಾಜಿಸಿದ್ದಾರೆ. ಕಳೆದ ಕೆಲವು ವಾರಗಳಲ್ಲಿ ಸ್ಥಿರವಾಗಿ ಹೆಚ್ಚುತ್ತಿರುವ ದೇಶದ R-ಮೌಲ್ಯವು ಏಪ್ರಿಲ್ 12-18 ರ ನಡುವಿನ ವಾರಕ್ಕೆ 1.07 ಆಗಿದೆ ಎಂದು … Continued