ರಾಜ್ಯದಲ್ಲಿ ಮೇ 10ರೊಳಗೆ ಮುಖ್ಯಮಂತ್ರಿಗಳ ಬದಲಾವಣೆ ಆಗಬಹುದು: ಹೊಸ ಬಾಂಬ್‌ ಸಿಡಿಸಿದ ಯತ್ನಾಳ

ವಿಜಯಪುರ: ಮೇ 10ರ ಒಳಗಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೇ 10 ರೊಳಗೆ ಮುಖ್ಯಮಂತ್ರಿ ಬದಲಾಗಬಹುದು, ಪರಿಸ್ಥಿತಿ ಅವಲೋಕನ ಮಾಡಲೆಂದು ಅಮಿತ್‌ ಷಾ ಬೆಂಗಳೂರಿಗೆ ಬಂದಿದ್ದಾರೆ. ಅಮಿತ್‌ ಶಾ ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯ ಹಾಗೂ ಪಕ್ಷದ ಹಿತದೃಷ್ಟಿಯಿಂದ ಪಕ್ಷ ನಿರ್ಣಯ ತೆಗೆದುಕೊಳ್ಳಲಿದೆ. ನಿನ್ನೆ ದೆಹಲಿಯಲ್ಲಿ ಹೈ ಪವರ್‌ ಸಭೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಇಂದು ಮುಖ್ಯಮಂತ್ರಿ ಬೊಮ್ಮಾಯಿಯವರು ಶಾಸಕರು ಹಾಗೂ ಸಂಸದರಿಗೆ ಆಯೋಜಿಸಿದ ಔತಣಕೂಟದ ಬಗ್ಗೆ ಕೇಳಿದ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನನಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಫೋನ್‌ ಕರೆ ಮಾಡಿ ಆಹ್ವಾನಿಸಲಾಗಿದೆ. ಆದರೆ ಇಂದು ಬಸವ ಜಯಂತಿ ಇದೆ. ಈ ಪವಿತ್ರ ದಿನದಂದು ವಿಜಯಪುರದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಹೀಗಾಗಿ ಬೆಂಗಳೂರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಮುಖ್ಯಮಂತ್ರಿ ಬದಲಾವಣೆ ಕುರಿತ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ಬದಲಾವಣೆಯಾದರೆ ಒಬ್ಬರಿಗೆ ಜೈಲಿಗೆ ಹೋಗುವ ಭಯ ಇದೆ. ಇನ್ನೊಬ್ಬರಿಗೆ ನಾನು ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಆತಂಕವಿದೆ ಎಂದರು.

ಪ್ರಮುಖ ಸುದ್ದಿ :-   ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement