ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಇಂದು, ಮಂಗಳವಾರ (ಮೇ 3) ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಗರದ ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಜೆಡಿಎಸ್‌ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ … Continued

ರಾಜಸ್ಥಾನದ ಜೋಧ್‌ಪುರದಲ್ಲಿ ಈದ್‌ಗೆ ಗಂಟೆಗಳ ಮೊದಲು ಕಲ್ಲು ತೂರಾಟ; ಇಂಟರ್ನೆಟ್ ಸೇವೆಗಳು ಸ್ಥಗಿತ

ಜೋಧ್‌ಪುರ್ (ರಾಜಸ್ಥಾನ): ಈದ್-ಉಲ್-ಫಿತರ್ ಮತ್ತು ಅಕ್ಷಯ ತೃತೀಯಾ ಆಚರಣೆಗೂ ಮುನ್ನ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದ ನಂತರ ರಾಜಸ್ಥಾನದ ಜೋಧ್‌ಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಈದ್ ಸಂದರ್ಭದಲ್ಲಿ ಧಾರ್ಮಿಕ ಧ್ವಜ ಅಳವಡಿಸುವ ವಿಚಾರದಲ್ಲಿ ಉಭಯ ಪಕ್ಷಗಳು ಪರಸ್ಪರ ಘರ್ಷಣೆ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲು ತೂರಾಟದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು … Continued

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆಲ್ಲುವುದಿಲ್ಲ, ಆದರೆ ಬಡ, ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಗಂಭೀರ ಪರಿಣಾಮ: ಬರ್ಲಿನ್ ಭೇಟಿ ವೇಳೆ ಪ್ರಧಾನಿ ಮೋದಿ

ನವದೆಹಲಿ: ಸೋಮವಾರ ಬರ್ಲಿನ್‌ನಲ್ಲಿ ಶಾಂತಿಗಾಗಿ ಪ್ರಬಲ ಒತ್ತಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾವುದೇ ಪಕ್ಷವೂ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ. “ಈ ಯುದ್ಧದಲ್ಲಿ ಯಾವುದೇ ವಿಜೇತರು ಇರುವುದಿಲ್ಲ ಮತ್ತು ಎಲ್ಲರೂ ನಷ್ಟ ಅನುಭವಿಸುತ್ತಾರೆ ಎಂದು ನಾವು ನಂಬುತ್ತೇವೆ. ಆದ್ದರಿಂದ, ನಾವು ಶಾಂತಿಯ ಪಕ್ಷಲ್ಲಿದ್ದೇವೆ ಎಂದು ಅವರು ಜರ್ಮನ್ ಚಾನ್ಸೆಲರ್ … Continued