ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆಲ್ಲುವುದಿಲ್ಲ, ಆದರೆ ಬಡ, ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಗಂಭೀರ ಪರಿಣಾಮ: ಬರ್ಲಿನ್ ಭೇಟಿ ವೇಳೆ ಪ್ರಧಾನಿ ಮೋದಿ

ನವದೆಹಲಿ: ಸೋಮವಾರ ಬರ್ಲಿನ್‌ನಲ್ಲಿ ಶಾಂತಿಗಾಗಿ ಪ್ರಬಲ ಒತ್ತಾಯ ಮಾಡಿದ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾವುದೇ ಪಕ್ಷವೂ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ.
“ಈ ಯುದ್ಧದಲ್ಲಿ ಯಾವುದೇ ವಿಜೇತರು ಇರುವುದಿಲ್ಲ ಮತ್ತು ಎಲ್ಲರೂ ನಷ್ಟ ಅನುಭವಿಸುತ್ತಾರೆ ಎಂದು ನಾವು ನಂಬುತ್ತೇವೆ. ಆದ್ದರಿಂದ, ನಾವು ಶಾಂತಿಯ ಪಕ್ಷಲ್ಲಿದ್ದೇವೆ ಎಂದು ಅವರು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಸಭೆಯ ನಂತರ ಹೇಳಿಕೆಗಳನ್ನು ನೀಡಿದ್ದಾರೆ.

ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯಿದೆ, ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಮೇಲೆ ಈ ಬೆಳವಣಿಗೆಗಳ ಪರಿಣಾಮವು ವಿಶೇಷವಾಗಿ ಗಂಭೀರವಾಗಿದೆ ಎಂದು ಅವರು ಹೇಳಿದರು.
60ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧದ ಮಾನವೀಯ ಪರಿಣಾಮಗಳ ಬಗ್ಗೆ ಪ್ರಧಾನಿ ಕಳವಳ ವ್ಯಕ್ತಪಡಿಸಿದರು. ಫೆಬ್ರವರಿ 24 ರಂದು ಪ್ರಾರಂಭವಾದ ರಷ್ಯಾದ ಆಕ್ರಮಣದಿಂದ ಸಾವಿರಾರು ನಾಗರಿಕರು ಕೊಲ್ಲಲ್ಪಟ್ಟರು ಮತ್ತು ಲಕ್ಷಾಂತರ ಜನರು ಸ್ಥಳಾಂತರಗೊಂಡರು.

ಉಕ್ರೇನಿಯನ್ ಬಿಕ್ಕಟ್ಟಿನ ಆರಂಭದಿಂದಲೂ, ನಾವು ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿದ್ದೇವೆ, ವಿವಾದವನ್ನು ಪರಿಹರಿಸಲು ಮಾತುಕತೆಯೇ ಏಕೈಕ ಮಾರ್ಗವಾಗಿದೆ ಎಂದು ಅವರು ಪುನರುಚ್ಚರಿಸಿದರು.
ಉಕ್ರೇನ್ ಮೇಲೆ ದಾಳಿ ಮಾಡುವ ಮೂಲಕ ರಷ್ಯಾ ವಿಶ್ವಸಂಸ್ಥೆಯ ಚಾರ್ಟರ್ ಅನ್ನು ಉಲ್ಲಂಘಿಸಿದೆ ಎಂದು ಚಾನ್ಸೆಲರ್ ಸ್ಕೋಲ್ಜ್ ಹೇಳಿದ್ದಾರೆ. ಜರ್ಮನಿಯಲ್ಲಿ ನಡೆಯಲಿರುವ ಜಿ-7 ಶೃಂಗಸಭೆಗೆ ಪ್ರಧಾನಿ ಮೋದಿಗೂ ಆಹ್ವಾನ ನೀಡಿರುವುದಾಗಿ ಅವರು ಹೇಳಿದ್ದಾರೆ.
ಮೂರು ರಾಷ್ಟ್ರಗಳ ಯುರೋಪ್ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೋಮವಾರ ಬೆಳಿಗ್ಗೆ ಬರ್ಲಿನ್‌ಗೆ ಆಗಮಿಸಿದರು, ನಂತರ ಅವರು ಡೆನ್ಮಾರ್ಕ್ ಮತ್ತು ಫ್ರಾನ್ಸ್‌ ಪ್ರವಾಸ ಮಾಡಲಿದ್ದಾರೆ.
ಪ್ರಧಾನಿ ಮೋದಿ ಯುರೋಪ್‌ಗೆ ತೆರಳುವ ಮುನ್ನಾದಿನದಂದು, ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ಉಕ್ರೇನ್‌ನಲ್ಲಿ ಯುದ್ಧವನ್ನು ನಿಲ್ಲಿಸಲು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಪರಿಹರಿಸಲು ಕರೆ ನೀಡಿದರು.

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement