ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಅದಕ್ಕೆ “ಮಾ” ಎಂದು ಶೀರ್ಷಿಕೆ ನೀಡಿರುವ ಆದಿತ್ಯನಾಥ ಅವರು ತಮ್ಮ ತಾಯಿ ಸಾವಿತ್ರಾ ದೇವಿ ಅವರೊಂದಿಗಿನ ಚಿತ್ರವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆದಿತ್ಯನಾಥ್ ಅವರು ಪ್ರಸ್ತುತ ಉತ್ತರಾಖಂಡ್ನ ತಮ್ಮ ಜನಿಸಿದ ಊರಾದ ಪೌರಿಯಲ್ಲಿದ್ದಾರೆ, ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಬುಧವಾರ ತಮ್ಮ ಸೋದರಳಿಯನ ಕೇಶ ಮುಂಡನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮಂಗಳವಾರ ತಮ್ಮ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
28 ವರ್ಷಗಳಲ್ಲಿ ಇದು ಮೊದಲ ಬಾರಿಗೆ ಉತ್ತರಾಖಂಡಕ್ಕೆ ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದಾರೆ ಎಂದು ವರದಿಯಾಗಿದೆ. ಸಾಂಕ್ರಾಮಿಕ ರೋಗ ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಏಪ್ರಿಲ್ 2020 ರಲ್ಲಿಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಹರಿದ್ವಾರದಲ್ಲಿ ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.
ಅಂತಿಮ ಕ್ಷಣದಲ್ಲಿ ನನ್ನ ತಂದೆಯ ದರ್ಶನ ಪಡೆಯಬೇಕೆಂಬ ಉತ್ಕಟ ಬಯಕೆ ನನಗಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದ 23 ಕೋಟಿ ಜನರ ಕರ್ತವ್ಯದ ಪ್ರಜ್ಞೆಯನ್ನು ಅನುಸರಿಸಿ, ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದರು.
ಈ ಹಿಂದೆ ತಮ್ಮ ತವರು ಜಿಲ್ಲೆಯ ಮಹಾಯೋಗಿ ಗುರು ಗೋರಖನಾಥ್ ಸರ್ಕಾರಿ ಕಾಲೇಜಿನಲ್ಲಿ ತಮ್ಮ ಆಧ್ಯಾತ್ಮಿಕ ಗುರು ಮಹಂತ್ ಅವೈದ್ಯನಾಥ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭಾವುಕರಾಗಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ತಾವು ಜನಿಸಿದ ಸ್ಥಳದಲ್ಲಿ ತಮ್ಮ ಆಧ್ಯಾತ್ಮಿಕ ಗುರುವಿನ ಪ್ರತಿಮೆಯನ್ನು ಅನಾವರಣಗೊಳಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ಹೇಳಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ