ಕೋಲ್ಕತ್ತಾ: ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೋವಿಡ್ ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹಬ್ಬಿಸುತ್ತಿದೆ, ಆದರೆ ಕೊರೊನಾ ಮುಗಿದ ನಂತರ ನಾವು ಸಿಎಎ ಜಾರಿಗೊಳಿಸುತ್ತೇವೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ ಎಂದು ಅಮಿತ್ ಶಾ ಹೇಳಿದ್ದಾರೆ.
ಸಿಎಎ ಒಂದು ವಾಸ್ತವ, ಸಿಎಎ ಒಂದು ವಾಸ್ತವ ಮತ್ತು ಸಿಎಎ ವಾಸ್ತವ ಆಗಿರುತ್ತದೆ. ಏನೂ ಬದಲಾಗಿಲ್ಲ” ಎಂದು ಅವರು ಹೇಳಿದರು.
ಡಿಸೆಂಬರ್ 2019 ರಲ್ಲಿ ಸಂಸತ್ತು ಅಂಗೀಕರಿಸಿದ, ಸಿಎಎ (CAA) ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ – ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತರು – ತಮ್ಮ ದೇಶಗಳಲ್ಲಿ ಕಿರುಕುಳದಿಂದ ಪಾರಾಗಲು ಅಂಥವರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅನುಮತಿಸುತ್ತದೆ. ಕಾಯಿದೆಯ ಅಡಿಯಲ್ಲಿ, ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದ ಈ ಸಮುದಾಯಗಳ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುವುದಿಲ್ಲ, ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು, ಬಿರ್ಭೂಮ್ನಲ್ಲಿ ಒಂಬತ್ತು ಜನರನ್ನು ಜೀವಂತವಾಗಿ ಸುಟ್ಟುಹಾಕಿದ್ದಾರೆ ಎಂದು ಹೇಳಿದರು.
“ಮಮತಾ ದೀದಿ, ಬಂಗಾಳದ ಜನರು ನಿಮ್ಮನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ ಮತ್ತು ನೀವು ನಿಮ್ಮನ್ನು ಸರಿಪಡಿಸುಕೊಳ್ಳುತ್ತೀರಿ ಎಂದು ನಾವು ಭಾವಿಸಿದ್ದೇವೆ, ಆದರೆ ನೀವು ಸರಿಪಡಿಸಿಕೊಂಡಿಲ್ಲ. ನೀವು ಹಿಂಸಾಚಾರವನ್ನು ನಿಲ್ಲಿಸುವವರೆಗೆ ಬಿಜೆಪಿ ನಿಮ್ಮ ವಿರುದ್ಧ ತನ್ನ ಹೋರಾಟವನ್ನು ಮುಂದುವರಿಸುತ್ತದೆ ಎಂದು ಶಾ ಹೇಳಿದರು.
ಪಕ್ಷದ ನಾಯಕರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಶಾ ಬಂಗಾಳಕ್ಕೆ ಭೇಟಿ ನೀಡುತ್ತಿದ್ದಾರೆ. ಮೇ 6 ರಂದು, ಅಮಿತ್ ಶಾ ಕೂಚ್ ಬೆಹಾರ್ನ ಮೂರು ಬಿಘಾ ಕಾರಿಡಾರ್ನಲ್ಲಿ ಬಿಎಸ್ಎಫ್ನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಗೃಹ ಸಚಿವರು ಕೋಲ್ಕತ್ತಾ ತಲುಪಿ ಪಕ್ಷದ ಶಾಸಕರು ಮತ್ತು ರಾಜ್ಯ ಬಿಜೆಪಿಯ ಉನ್ನತ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
ಚುನಾವಣೆಯ ನಂತರದ ಹಿಂಸಾಚಾರದ ನಂತರ, ಮಾನವ ಹಕ್ಕುಗಳ ಆಯೋಗವು ಇಲ್ಲಿ ಕಾನೂನಿನ ಆಡಳಿತವಿಲ್ಲ ಎಂದು ಹೇಳಿದೆ. 100 ಕ್ಕೂ ಹೆಚ್ಚು ಕೊಲೆಗಳು, 1,829 ಜನರಿಗೆ ಗಾಯಗಳು ಮತ್ತು 161 ಪ್ರಕರಣಗಳಲ್ಲಿ ಟಿಎಂಸಿ ಜನರು ಭಾಗಿಯಾಗಿದ್ದಾರೆ, ಬಿಜೆಪಿ ಕಾರ್ಯಕರ್ತರು ಭಯಪಡಬೇಡಿ. ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾ ಹೇಳಿದರು.
ಮಮತಾ ಬ್ಯಾನರ್ಜಿ ಅವರು ರಾಜ್ಯವನ್ನು ಆರ್ಥಿಕವಾಗಿ ದುರ್ಬಲಗೊಳಿಸಿದ್ದಾರೆ. ಸಿಂಡಿಕೇಟ್ ಆಡಳಿತ, ಚಿತ್ರಹಿಂಸೆ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯುತ್ತದೆ” ಎಂದು ಅವರು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ