ಪಿಎಸ್‌ಐ ನೇಮಕ ಪರೀಕ್ಷೆ ಹಗರಣ: ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದಲ್ಲಿ ಈಗ ಪೊಲೀಸರ ಬಂಧನವೂ ಆಗುತ್ತಿದ್ದು, ಈ ಪ್ರಕರಣದ ಸಂಬಂಧ ರಾಯಚೂರು ಜಿಲ್ಲೆ ಲಿಂಗಸೂಗೂರು ಡಿವೈ‌ಎಸ್‌ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಬಂಧನವಾಗಿದೆ.
ನಿನ್ನೆಯಿಂದ ಸುದೀರ್ಘವಾಗಿ ತೀವ್ರ ವಿಚಾರಣೆ ನಡೆಸಿದ ಸಿಐಡಿ ತಂಡ ಇಂದು, ಗುರುವಾರ ಇಬ್ಬರೂ ಅಧಿಕಾರಿಗಳನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದೆ. ಮಲ್ಲಿಕಾರ್ಜುನ ಸಾಲಿ ಈ ಹಿಂದೆ ಆಳಂದ ಉಪ ವಿಭಾಗದ‌ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸಿದ್ದರು. ಅಕ್ರಮದಲ್ಲಿ ಸಾಲಿ ಪಾತ್ರದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.
ಸದ್ಯ ಡಿವೈಎಎಸ್​ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಸಿಪಿಐ ಆನಂದ್ ಮೇತ್ರೆ ವಶಕ್ಕೆ ಪಡೆದಿರುವ ಸಿಐಡಿ, ವೈದ್ಯಕೀಯ ತಪಾಸಣೆ ನಂತರ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹಾಗೂ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡಲು ಸಿಐಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ನಿರೀಕ್ಷೆ ಇದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement