ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ, ಹುಬ್ಬಳ್ಳಿಯ ನಾಗಶಾಂತಿ ಗ್ರುಪ್ ಆಫ್ ಕಂಪನಿಯವರು ಮೇ 7ರಂದು, ಬೆಳಿಗ್ಗೆ 9 ಗಂಟೆಗೆ ಜೆ.ಎಸ್.ಎಸ್ ಉತ್ಸವ ಸಭಾಭವನದಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.
ಸಿಇಓ, ಸಿಎಫ್ಓ, ಇನ್ಶೂರೆನ್ಸ್ ಹೆಡ್, ಐ.ಟಿ ಅಡ್ಮಿನ್, ಜ್ಯೂನಿಯರ್ ಡಿಜಿಟಲ್ ಮಾರ್ಕೆಟರ್ ಟೆಕ್ನಿಶಿಯನ್ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ.
ಐಟಿಐ, ಬಿಕಾಂ, ಬಿಸಿಎ, ಬಿ.ಇ, ಬಿ.ಟೆಕ್, ಎಂ.ಎ, ಎಮ್.ಕಾಂ, ಎಂ.ಎಸ್ಸಿ, ಎಮ್.ಬಿ.ಎ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನಕ್ಕೆ ಹಾಜರಾಗಬಹುದು. ಆಸಕ್ತರು 0836-2462202ಕ್ಕೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಬಹುದು. ಅಭ್ಯರ್ಥಿಗಳು ತಮ್ಮ ಬಯೋಡೆಟಾ, ಪಾಸಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ