ಹುಬ್ಬಳ್ಳಿ: ಇಂದು ಯೋಗ ಕಹಳೆ ಕಾರ್ಯಕ್ರಮ

ಹುಬ್ಬಳ್ಳಿ: ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ ಪಾರ್ಕ್‌ನ ವಿವೇಕ ಜಾಗೃತ ಬಳಗಗಳ ಆಶ್ರಯದಲ್ಲಿ ಸರ್ವೋತೊಮುಖ ಪ್ರಗತಿಗೆ ಪೂರಕವಾದ ‘ಯೋಗ ಕಹಳೆ’ ಕಾರ್ಯಕ್ರಮ ಭಾನುವಾರ ಮೇ ೮ರಂದು ಬೆಳಿಗ್ಗೆ ೧೦:೩೦ ರಿಂದ ವಿದ್ಯಾನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಸಭಾ ಭವನದಲ್ಲಿ ನಡೆಯಲಿದೆ.
ಯೋಗ ಕಹಳೆ ಕಾರ್ಯಕ್ರಮದಲ್ಲಿ ಕೋಟದ ಮೂಡುಗಿಳಿಯಾರು ಯೋಗಬನ ವೈದ್ಯಕೀಯ ನಿರ್ದೇಶಕರು ಮತ್ತು  ಸರ್ವಕ್ಷೇಮ ಆಸ್ಪತ್ರೆ ಹಾಗೂ ಸಂಶೋಧನಾ ಪ್ರತಿಷ್ಠಾನ ನಿರ್ದೇಶಕru, ಸಿ.ಇ.ಓ  ಡಾ. ವಿವೇಕ ಉಡುಪ ವ್ಯಕ್ತಿತ್ವ ವಿಕಸನದ ಬಗ್ಗೆ ಮಾತನಾಡಲಿದ್ದಾರೆ. ಕೆಎಲ್‌ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.

ಡಾ. ವಿವೇಕ ಉಡುಪ ಅವರು ೫೨,೦೦೦ ರೋಗಿಗಳಿಗೆ ಉಚಿತ ಸೇವೆ ನೀಡಿದ್ದಾರಲ್ಲದೆ ಮತ್ತು ಯೋಗ ಮತ್ತು ಪ್ರಕೃತಿ ಚಿಕಿತ್ಸೆಗಳ ಬಗ್ಗೆ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮಾಡುತ್ತಿದ್ದಾರೆ.
ಯೋಗ ಕಹಳೆಯ ನೋಂದಣಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ಬಳಗದ ಅಧ್ಯಕ್ಷರಾದ ವಿ.ವಿ. ಸ್ಥಾವರಮಠ ಮೊ : ೮೧೨೩೬೫೯೨೮೭, ಉಪಾಧ್ಯಕ್ಷರಾದ ವಿಜಯಾ ಪರಡ್ಡಿ ಮೊ: ೯೩೪೯೧೮೭೦೪೮ ಮತ್ತು ಸೇವಾಶ್ರೀ ಡಾ. ಬಿ.ಎಸ್. ಮಾಳವಾಡ ಮೊ : ೯೪೪೮೩ ೫೪೮೦೫ ಅವೆನ್ನು ಸಂಪರ್ಕಿಸಲು ಬಳಗದ ಡಾ. ಪಂಕಜಾ ಬ್ಯಾಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement