ಬಸ್‌-ಇನ್ನೋವಾ ಕಾರ್‌ ಡಿಕ್ಕಿ: ಆರು ತಿಂಗಳ ಮಗು ಸಹಿತ ಮೂವರು ಸ್ಥಳದಲ್ಲೇ ಸಾವು

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೆಮ್ಮಾಳೆದೊಡ್ಡಿ ಬಳಿ ಶನಿವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಇನೋವಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಅಕ್ಷತಾ, ಅವರ ಆರು ತಿಂಗಳ‌ ಮಗು ಸುಮಂತ ಹಾಗೂ ಕಾರು ಚಾಲಕ ಉಮೇಶ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಇದ್ದ ಇನ್ನೂ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿದ್ದು, … Continued

ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಗೋ ಮಾತಾ ಸಹಕಾರ ಸಂಘ ಸ್ಥಾಪನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಗೋವಿನ ಅನೇಕ ಉತ್ಪನ್ನಗಳನ್ನು ಜನರು ಖರೀದಿ ಮಾಡುತ್ತಾರೆ. … Continued

ತನ್ನ ಮೇಲೆ ತಂದೆ ಅತ್ಯಾಚಾರ ಎಸಗುತ್ತಿರುವ ವೀಡಿಯೊ ಶೂಟ್ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿ ನ್ಯಾಯ ಕೇಳಿದ ಬಾಲಕಿ: ತಂದೆಯ ಬಂಧನ

ಸಮಸ್ಟಿಪುರ: ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತ ಮಗಳ ಮೇಲೆ ಅತ್ಯಾಚಾರವೆಸಗಿರುವ ವೀಡಿಯೊ ವೈರಲ್ ಆಗಿದೆ. ಆರೋಪಿಯು ವೃತ್ತಿಯಲ್ಲಿ ಶಿಕ್ಷಕನಾಗಿದ್ದು, ಸಮಸ್ತಿಪುರದ ರೋಸೆರಾ ನಿವಾಸಿಯಾಗಿದ್ದಾನೆ. ಆತನ 18 ವರ್ಷದ ಮಗಳು ತಂದೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಮತ್ತು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ. ಅವಳು ತನ್ನ ತಂದೆಯನ್ನು ಬಹಿರಂಗಪಡಿಸಲು ಗುಪ್ತ … Continued

ಎರಡು ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ: ಅನಾಹುತ 7 ಮಂದಿ ಸಾವು

ಇಂದೋರ್‌: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸ್ವರ್ನ್ ಬಾಗ್ ಕಾಲೋನಿಯಲ್ಲಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ನಸುಕಿನ ಜಾವ ಸಂಭವಿಸಿದ ದೊಡ್ಡ ಬೆಂಕಿ ಅನಾಹುತದಲ್ಲಿ ಏಳು ಜನರು ಸಾವಿಗೀಡಾಗಿದ್ದಾರೆ. ಎಲೆಕ್ಟ್ರಿಕ್ ಮೀಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಬೆಂಕಿ ಕಟ್ಟಡಕ್ಕೂ ವ್ಯಾಪಿಸಿದೆ. ಮಾಹಿತಿ ಪಡೆದ ಕೂಡಲೇ … Continued

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂ. ಏರಿಕೆ

ನವದೆಹಲಿ: ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿದೆ. ಮೂರು ತಿಂಗಳಲ್ಲಿ ಇದು ಎರಡನೇ ಹೆಚ್ಚಳವಾಗಿದ್ದು, ಈ ವರ್ಷದ ಮಾರ್ಚ್‌ನಲ್ಲಿ ಕೊನೆಯ ಬಾರಿಗೆ ಏರಿಕೆ ಮಾಡಲಾಗಿತ್ತು. ಶನಿವಾರದ ಇತ್ತೀಚಿನ ಪರಿಷ್ಕರಣೆಯೊಂದಿಗೆ, ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗೃಹಬಳಕೆಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 999.50 ರೂ.ಗಳಾಗಿವೆ. ಏರುತ್ತಿರುವ ಪೆಟ್ರೋಲ್ … Continued

ಕನ್ನಡದ ಹೆಸರಾಂತ ಹಾಸ್ಯ ನಟ ಮೋಹನ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದಾಗಿ ಕನ್ನಡ ಚಿತ್ರರಂಗದ ಹಾಸ್ಯ ಹಾಗೂ ಪೋಷಕ ನಟ ಮೋಹನ್ ಜುನೇಜ (54) ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೆಸರುಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಮೋಹನ್ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಕೆಲದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೋಹನ ಅವರು ಪತ್ನಿ ಕುಸುಮಾ, ಇಬ್ಬರು ಪುತ್ರರು ಅಕ್ಷಯ್, ಅಶ್ವಿನ್‌ ಅವರನ್ನು ಅಗಲಿದ್ದಾರೆ. ಮೋಹನ್ ಜೂನೇಜ ಅವರಿಗೆ `ಚೆಲ್ಲಾಟ’ … Continued

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಅಧ್ಯಕ್ಷರ ವಿರುದ್ಧ ‘ಒಳ ಉಡುಪು ಪ್ರತಿಭಟನೆ’ ಆರಂಭ…ವೀಕ್ಷಿಸಿ

ಕೋಲಂಬೊ: ದಶಕಗಳಲ್ಲಿ ದ್ವೀಪದ ಭೀಕರ ಆರ್ಥಿಕ ಬಿಕ್ಕಟ್ಟನ್ನು ಸರ್ಕಾರ ನಿಭಾಯಿಸುತ್ತಿರುವುದನ್ನು ಖಂಡಿಸಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಕಾರ್ಮಿಕರು ಪ್ರತಿಭಟಿಸಿದ್ದರಿಂದ ಶುಕ್ರವಾರ ಶ್ರೀಲಂಕಾದಲ್ಲಿ ಸಾವಿರಾರು ಅಂಗಡಿಗಳು, ಶಾಲೆಗಳು ಮತ್ತು ಕಂಪನಿಗಳನ್ನು ಮುಚ್ಚಲಾಗಿತ್ತು. ಕೋವಿಡ್‌ ಸಾಂಕ್ರಾಮಿಕ ರೋಗ, ಏರುತ್ತಿರುವ ತೈಲ ಬೆಲೆಗಳು ಮತ್ತು ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರ ಸರ್ಕಾರದಿಂದ ತೆರಿಗೆ ಕಡಿತದ ಪರಿಣಾಮವಾಗಿ ಶ್ರೀಲಂಕಾವು $ … Continued