ಧ್ವನಿವರ್ಧಕ ವಿಚಾರದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳುವುದು ಬೇಡ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಧ್ವನಿವರ್ಧಕಗಳ ಶಬ್ದಮಿತಿ ಬಗ್ಗೆ ರಾಜ್ಯ ಸರ್ಕಾರವೇ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತದೆ. ಯಾರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ನೀಡಿದ ಗಡುವು ಕುರಿತು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಕೆಲಸವನ್ನು ಸರ್ಕಾರ ಮಾಡುತ್ತದೆ. ಯಾರೂ ಕಾನೂನು ಕೈಗೆತ್ತಿಕೊಳ್ಳುವದನ್ನು ಮಾಡಬಾರದು ಎಂದು ಹೇಳಿದರು.

ಸರ್ಕಾರವೇ ಪತನಗೊಳ್ಳುವಂತಹ ಕಿಂಗ್‌ಪಿನ್‌ಗಳು ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಇದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹವರು ವಿಚಾರ ಗೊತ್ತಿದ್ದರೆ ಸೂಕ್ತ ದಾಖಲೆ ಒದಗಿಸಲಿ. ಅದು ಬಿಟ್ಟು ಅನಗತ್ಯ ಹೇಳಿಕೆ ನೀಡುವುದು ಬೇಡ, ಅದರಿಂದ ಯಾವ ಪ್ರಯೋಜನವೂ ಇಲ್ಲ. ಪ್ರಿಯಾಂಕ್ ಖರ್ಗೆ ಅವರ ಜೊತೆಗಿದ್ದ ಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷ ಈಗಾಗಲೇ ಸಿಕ್ಕಿ ಬಿದ್ದಿದ್ದಾನೆ. ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೋ ಅವರನ್ನು ಸಿಐಡಿ ವಿಚಾರಿಸಿ ಬಂಧಿಸಲಿದೆ. ಸುಖಾಸುಮ್ಮನೆ ಆರೋಪ ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement