ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರದಲ್ಲಿ ಮುರಿದ ತೇಲುವ ಸೇತುವೆ: ಹಾನಿ ತಪ್ಪಿಸಲು ನಾವೇ ಸೇತುವೆ ಲಾಕ್‌ ತೆಗೆದಿದ್ದೇವೆ ಎಂದು ನಿರ್ವಾಹಕರ ಸ್ಪಷ್ಟನೆ

ಉಡುಪಿ : ಹೆಸರಾಂತ ಮಲ್ಪೆ ಕಡಲತೀರದಲ್ಲಿ ರಾಜ್ಯದ ಏಕೈಕ ತೇಲುವ ಸೇತುವೆ ಉದ್ಘಾಟನೆಯಾದ ಮೂರೇ ದಿನಕ್ಕೆ ಹಾಳಾಗಿದೆ.
ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಆಕರ್ಷಣೆಗೆಂದು , ತೊಯ್ದಾಡುವ ಅಲೆಗಳ ಮಧ್ಯೆ ತೇಲುತ್ತಾ, ಪ್ರವಾಸಿಗರಿಗೆ ವಿಶೇಷ ಅನುಭವ ನೀಡುವ ಈ ತೂಗು ಸೇತುವೆಯನ್ನು ಸುಮಾರು 80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದು.ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಬ್ರಿಡ್ಜ್ ಭಾಗ ಚದುರಿ ಹೋಗಿದೆ.
ಭಾನುವಾರ ಬೆಳಗ್ಗೆಯಿಂದಲೇ ಕಡಲು ಪ್ರಕ್ಷುಬ್ಧವಾಗಿದ್ದು, ನೂತನ ಅಲೆಗಳಲ್ಲಿ ತೇಲುವ ಸೇತುವೆ ಮೇಲೆ ಆನಂದ ಅನುಭವಿಸಲು ಹೆಚ್ಚಿನ ಸಂಖ್ಯೆಯ ಜನರು ಆಗಮಿಸಿದ್ದರು. ಆದರೆ ಅಲೆಗಳ ಅಬ್ಬರ ಹೆಚ್ಚಿದ್ದರಿಂದ ಜನರ ಸುರಕ್ಷತೆ ದೃಷ್ಟಿಯಿಂದ ಸೇತುವೆ ಮೇಲೆ ನಡೆದಾಡಲು ಅವಕಾಶ ನೀಡಿರಲಿಲ್ಲ.

ಸುಮಾರು 100 ಮೀ. ಉದ್ದ, 3.50 ಮೀ. ಅಗಲವಿರುವ ಈ ಸೇತುವೆಯನ್ನು ಹೆಚ್ಚಿನ ಸಾಂದ್ರತೆಯ ಫೋಂಟೋನ್ಸ್ ಬ್ಲಾಕ್ ಗಳಿಂದ ಮಾಡಲಾಗಿದೆ .ಆದರೆ ಅಲೆಗಳ ಭೀಕರ ಹೊಡೆತಕ್ಕೆ ಸಿಲುಕಿದ್ದು, ಸೇತುವೆ ಬಿಡಿಭಾಗಗಳು ಸಮುದ್ರ ದಡಕ್ಕೆ ಬಂದು ಬಿದ್ದಿವೆ. ಕೇರಳದ ಬೇಪೋರ್ ಬೀಚ್ ಹೊರತುಪಡಿಸಿದರೆ ದೇಶದ ಬೇರೆಲ್ಲೂ ಈ ರೀತಿಯ ತೇಲುವ ಸೇತುವೆ ಇರಲಿಲ್ಲ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಆದರೆ ಉದ್ಘಾಟನೆಯಾದ ಮೂರೇ ದಿನಕ್ಕೆ ಸಮುದ್ರ ಪಾಲಾದ ಬಗ್ಗೆ ವರದಿಗಳನ್ನು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ನಿರ್ವಾಹಕರು ತಳ್ಳಿಹಾಕಿದ್ದಾರೆ. ಏಕಾಏಕಿ ಸಮುದ್ರದ ಅಬ್ಬರ ಕಾಣಿಸಿಕೊಂಡ ಕಾರಣ ಸೇತುವೆಯನ್ನು ಕಳಚಲು ಸಾಧ್ಯವಾಗಲಿಲ್ಲ. ಸೇತುವೆಯ ಹಾನಿ ತಪ್ಪಿಸಲು ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, “ಸೈಕ್ಲೋನ್ ಎಫೆಕ್ಟ್ ಮತ್ತು ಭಾರೀ ಗಾಳಿಯಿಂದಾಗಿ, ತೇಲುವ ಸೇತುವೆಗೆ ಯಾವುದೇ ಹಾನಿಯಾಗದಂತೆ ನಾವು ಸೇತುವೆಯ ಲಾಕ್ ಗಳನ್ನು ಕಡಿತಗೊಳಿಸಿದ್ದೇವೆ. ಇದರಿಂದಾಗಿ ಇಂದು ಬೆಳಗ್ಗೆ ಸೇತುವೆಯ ಕೆಲವು ಬ್ಲಾಕ್‌ಗಳು ಸಮುದ್ರದಲ್ಲಿ ತೇಲುತ್ತಿದ್ದವು ಎಂದು ಹೇಳಿದ್ದಾರೆ.

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement