ಆಜಾನ್‌-ಹನುಮಾನ ಚಾಲೀಸಾ ಸಂಘರ್ಷ: ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.
ಇನ್ಮುಂದೆ ಲೌಡ್​ಸ್ಪೀಕರ್ (Loudspeaker) ಬಳಸುವವರು ಅಧಿಕೃತವಾಗಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ಮಾರ್ಗಸೂಚಿ ಹೊರಡಿಸಿದ್ದಾರೆ. ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಎಸ್‌. ಬೊಮ್ಮಾಯಿ ಅವರು, ಈ ಕುರಿತು ತೀರ್ಮಾನಕ್ಕೆ ಬರುವ ಸಲುವಾಗಿ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿ ಹಾಗೂ ಐಜಿಪಿ, ಹೆಚ್ಚುವರಿ ಅಡ್ವೊಕೇಟ್ ಜನರಲ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದರು.

ಈ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆ ಬಗ್ಗೆ ಸುಪ್ರೀಕೋರ್ಟ್‌ ಹೊರಡಿಸಿರುವ ಆದೇಶ, ರಾಜ್ಯ ಸರ್ಕಾರವು ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ) ರೂಪಿಸಿರುವ ನಿಯಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಳಿಕ ಮಾರ್ಗಸೂಚಿಗಳನ್ನು ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ನೀಡಿದ್ದಾರೆ.
ಶಬ್ದ ಮಾಲಿನ್ಯ(ನಿಯಂತ್ರಣ ಮತ್ತು ನಿಯಂತ್ರಣ) ನಿಯಮಗಳು, 2000, ನಿಯಮ 3(1) ಅಡಿಯಲ್ಲಿ. ಹೇಳಿರುವಂತೆ ‘ಹಗಲಿನ ಸಮಯ’ ಎಂದರೆ ಬೆಳಗ್ಗೆ 6.00 ರಿಂದ ಬೆಳಗ್ಗೆ 10.00 ರವರೆಗೆ ಬಳಸಬಹುದು ಮತ್ತು ರಾತ್ರಿಯ ಸಮಯ ಎಂದರೆ ರಾತ್ರಿ 10.00 ರಿಂದ ಬೆಳಗ್ಗಿನ ಜಾವ 6.00 ರವರೆಗೆ ಸಾರ್ವಜನಿಕವಾಗಿ ಧ್ವನಿವರ್ಧಕ ಬಳಕೆ ಮಾಡುವಂತಿಲ್ಲ. ಉಳಿದ ಸಮಯದಲ್ಲಿ ಧ್ವನಿವರ್ಧಕ ಬಳಕೆ ಮಾಡಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದಿರಬೇಕು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ಮಾರ್ಗಸೂಚಿ ಪ್ರಕಾರ ಧ್ವನಿವರ್ಧಕಗಳು ಅಥವಾ ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಬಳಕೆದಾರರು 15 ದಿನಗಳೊಳಗೆ ಗೊತ್ತುಪಡಿಸಿದ ಪ್ರಾಧಿಕಾರದಿಂದ ಲಿಖಿತ ಅನುಮತಿಯನ್ನು ಪಡೆಯಬೇಕು. ಪಡೆಯದವರು ಸ್ವಯಂ ಪ್ರೇರಣೆಯಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಅಥವಾ ಗೊತ್ತುಪಡಿಸಿದ ಪ್ರಾಧಿಕಾರವು ತೆಗೆದುಹಾಕಲು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ.
ಎಲ್ಲ ಪೊಲೀಸ್ ಕಮಿಷನರೇಟ್ ಪ್ರದೇಶಗಳಲ್ಲಿ – ಸಹಾಯಕ ಪೊಲೀಸ್ ಕಮಿಷನರ್ ಜುರಿಸ್ಡಿಕ್ಷನಲ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರತಿನಿಧಿ. ಇತರ ಪ್ರದೇಶಗಳಲ್ಲಿ ಡಿವೈಎಸ್‌ಪಿ, ತಾಲ್ಲೂಕು ದಂಡಾಧಿಕಾರಿ (ತಹಸೀಲ್ದಾರ್)‌ ಅನುಮತಿ ನೀಡುವ ಪ್ರಾಧಿಕಾರಗಳಾಗಿವೆ.

ಲೌಡ್ ಸ್ಪೀಕರ್‌ಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಯನ್ನು ಬಳಸುವ ಎಲ್ಲಾ ಆವರಣಗಳಿಗೆ ಇದು ಅನ್ವಯಿಸುತ್ತದೆ. ಇದನ್ನು ತಕ್ಷಣದ ಪರಿಣಾಮದೊಂದಿಗೆ ಕಾರ್ಯಗತಗೊಳಿಸಲು ಅಗತ್ಯವಿರುವ ಸರ್ಕಾರಿ ನಿರ್ದೇಶನಗಳನ್ನು ಸಂಬಂಧಪಟ್ಟವರಿಗೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ನಿರ್ಬಂಧಿಸಿದ ವೇಳೆಗಳಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಆಜಾನ್‌ಗೆ ಲೌಡ್‌ ಸ್ಪೀಕರ್‌ ಬಳಕೆ ನಿಲ್ಲಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕೆಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿ ದೇವಸ್ಥಾನಗಳಲ್ಲಿ ಸುಪ್ರಭಾತ, ಭಜನೆ ಮತ್ತು ಹನುಮಾನ್‌ ಚಾಲೀಸ್‌ ಅನ್ನು ಮೇ ೦೯ರ ಬೆಳಗ್ಗಿನ ಜಾವದಿಂದ ಆರಂಭಿಸಿವೆ ಎಂಬುದನ್ನು ಸ್ಮರಿಸಬಹುದು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement