ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಆಸ್ಪತ್ರೆ ವೆಚ್ಚ ಸರ್ಕಾರವೇ ಭರಿಸಲಿದೆ: ಸಚಿವ ಕೋಟ

ಮಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಮಂಗಳವಾರ ನಗರದ ಕೆಎಂಸಿ ಆಸ್ಪತ್ರೆಗೆ ಆಗಮಿಸಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಿಸಿದರು.
ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಸುಕ್ರಿ ಬೊಮ್ಮಗೌಡ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಐಸಿಯುನಲ್ಲಿದ್ದರು. ಆರೋಗ್ಯದಲ್ಲಿ ಸುಧಾರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಅವರ ಆರೋಗ್ಯ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ವಿಚಾರಣೆ ಮಾಡಿದರು. ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.

ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸುಕ್ರಜ್ಜಿಯ ಆರೋಗ್ಯ ವಿಚಾರಿಸಲು ಹೇಳಿದ್ದರು. ಅದರಂತೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ ಸುಕ್ರಜ್ಜಿಯ ಆಸ್ಪತ್ರೆಯ ವೆಚ್ಚವನ್ನು ಸರಕಾರ ಭರಿಸಲಿದೆ. ಅವರಿಗೆ ಸಕಾಲದಲ್ಲಿ ಹೃದಯ ಚಿಕಿತ್ಸೆ ಸಿಕ್ಕಿರುವುದು ಬಹಳ ಸಂತೋಷ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ನಗುನಗುತ್ತಾ ಮಾತನಾಡಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎನ್ನುವುದು ಸರಕಾರದ ಆಶಯ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement