ಪಿಎಸ್ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ: ಪಿಎಸ್‌ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಇಂದು, ಬುಧವಾರ ಆತ್ಮಹತ್ಯೆಗೆ ಶರಣಾದ ಘಟನೆ ಹೊಳೆನರಸೀಪುರ ತಾಲೂಕಿನ ಗುಂಜೇವು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಗುಂಜೇವು ಗ್ರಾಮದ ಮನುಕುಮಾರ ಅವರ ಅಣ್ಣ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ವಾಸು(48) ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ.

ಪಿಎಸ್‌ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಮನುಕುಮಾರ ಹೆಸರಿತ್ತು. ಪಟ್ಟಿಯಲ್ಲಿ ಮನುಕುಮಾರ್ ೫೦ನೇ ರ್ಯಾಂಕ್‌ ಪಡೆದಿದ್ದ. ಆದರೆ ಮನುಕುಮಾರ ಅವರನ್ನು ಈ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು. ಇದರಿಂದ ಮನನೊಂದು ವಾಸು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಯೇ ಎಂಬುದು ದೃಢಪಡಬೇಕಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಕಳೆದ ಏ. ೩೦ರಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ಮನುಕುಮಾರ್ ನನ್ನು ಬಂಧಿಸಿ ಊರಿಗೆ ಕರೆದೊಯ್ದು ಮಹಜರು ಮಾಡಿದ್ದಾರೆ. ಪ್ರಸ್ತುತ ಮನುಕುಮಾರ ಸಿಐಡಿ ಪೊಲೀಸರ ವಶದಲ್ಲಿದ್ದಾನೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement