ಬೆಳಗಾವಿ : ಎಂಇಎಸ್ನವರು ಬೆಳಗಾವಿಗೆ ಆಗಮಿಸಿರುವ ಮಹಾರಾಷ್ಟ್ರದ ಮಾಜಿಮುಖ್ಯಮಂತ್ರಿ ಶರದ್ ಪವಾರ್ ಎದುರು ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಘೋಷಣೆ ಕೂಗಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಎರಡು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಂಡಿದ್ದಾರೆ. ಇಂದು, ಬುಧವಾರ ಬೆಳಗಾವಿಯ ಮರಾಠಾ ಬ್ಯಾಂಕ್ನ ಅಮೃತ್ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಶರದ್ ಪವಾರ್ ಭಾಷಣ ಆರಂಭವಾಗುತ್ತಿದ್ದಂತೆ ಎಂಇಎಸ್ನವರು, ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಾಲ್ಕಿಯನ್ನು ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದರು.
ಅವರು ನಾಡದ್ರೋಹಿ ಘೋಷಣೆ ಕೂಗುವ ವೇಳೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಮ್ಮನೆ ನಿಂತರು. ಈ ವೇಳೆ ಎಂಇಎಸ್ ಮುಖಂಡ ದೀಪಕ್ ದಳವಿ, ಕೃಷ್ಣ ಮೊಪಸೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಎನ್ಸಿಪಿ ಕಾರ್ಯಕರ್ತರಿಂದ ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ :
ನಗರದ ಕಿತ್ತೂರು ರಾಣಿ ಚೆನ್ನಮ್ಮ ಮೂರ್ತಿ ಕಟ್ಟೆಗೆ ಶೂ ಧರಿಸಿ ಎನ್ಸಿಪಿ ಕಾರ್ಯಕರ್ತರು ಮಾಲಾರ್ಪಣೆ ಮಾಡಿದ ಘಟನೆ ನಡೆಯಿತು. ಬೆಳಗಾವಿ ಪ್ರವಾಸದಲ್ಲಿರುವ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದ ಎನ್ಸಿಪಿ ನಾಯಕ ಶರದ್ ಪವಾರ್ಗೆ ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೋರಲಾಯಿತು.
ನಿಮ್ಮ ಕಾಮೆಂಟ್ ಬರೆಯಿರಿ