ಬೆಂಗಳೂರು: ಶಿವಮೊಗ್ಗದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಬುಧವಾರ ಎನ್ಐಎ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಕೊಲೆ ಪ್ರಕರಣಕ್ಕೆ ಸಂಂಧಿಸಿದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 180 ದಿನಗಳಿಗೆ ವಿಸ್ತರಿಸಲು ಎನ್ಐಎ ಪರ ವಕೀಲರು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು 180 ದಿನಗಳಿಗೆ ವಿಸ್ತರಿಸಿ ಆದೇಶಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ