ದೆಹಲಿಯ ಮುಂಡ್ಕಾದಲ್ಲಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ: 27 ಮಂದಿ ಸಾವು

ನವದೆಹಲಿ: ಶುಕ್ರವಾರ ಸಂಜೆ 4:45 ರ ಸುಮಾರಿಗೆ ದೆಹಲಿಯ ಮುಂಡ್ಕಾದಲ್ಲಿರುವ ಕಚೇರಿ ಕಟ್ಟಡದಲ್ಲಿ ಭಾರಿ ಬೆಂಕಿ ಅನಾಹುತದಲ್ಲಿ 27 ಜನರು ಸಾವಿಗೀಡಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಶುಕ್ರವಾರ ರಾತ್ರಿಯವರೆಗೆ ಅನೇಕ ಜನರು ಇನ್ನೂ ಕಟ್ಟಡದಲ್ಲಿ ಸಿಲುಕಿಕೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 40ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಕಾರ್ಯಾಚರಣೆಯನ್ನು … Continued

ರಾಹುಲ್ ಭಟ್ ಹತ್ಯೆ ತನಿಖೆಗೆ ಎಸ್‌ಐಟಿ ರಚನೆ ಮಾಡಿದ: ಜಮ್ಮು-ಕಾಶ್ಮೀರ ಆಡಳಿತ, ಪತ್ನಿಗೆ ಸರ್ಕಾರಿ ಉದ್ಯೋಗದ ಭರವಸೆ

ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರ ಆಡಳಿತವು ಬುದ್ಗಾಮ್ ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಉದ್ಯೋಗಿ ರಾಹುಲ್ ಭಟ್ ಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಕಾಶ್ಮೀರಿ ಪಂಡಿತ ರಾಹುಲ್ ಭಟ್ ಗುರುವಾರ ಭಯೋತ್ಪಾದಕರ ಗುಂಡಿನ ದಾಳಿಗೆ ಒಳಗಾಗಿದ್ದು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಅವರ ಸಾವಿನ ನಂತರ ಕಾಶ್ಮೀರಿ ಪಂಡಿತ್ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. … Continued

ಕಂಪನಿಯು ಕಚೇರಿಗೆ ಬಂದು ಕೆಲಸ ಮಾಡಲು ಸೂಚಿಸಿದ್ದಕ್ಕೆ 800 ಉದ್ಯೋಗಿಗಳಿಂದ ರಾಜೀನಾಮೆ…!

ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಸುಧಾರಿಸಿರುವುದರಿಂದ, ಹಲವಾರು ಕಂಪನಿಗಳು ಈಗಾಗಲೇ ತಮ್ಮ ಉದ್ಯೋಗಿಗಳನ್ನು ಕಚೇರಿಗೆ ಕರೆಸಿ, ಮನೆಯಿಂದ ಕೆಲಸ ಮಾಡುವುದನ್ನು (WFH) ಕೊನೆಗೊಳಿಸಿವೆ. ಆದಾಗ್ಯೂ, ಕೆಲವು ಉದ್ಯೋಗಿಗಳು ಮುಂದೆ ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಾರೆ. ಇತ್ತೀಚೆಗೆ ಕಂಪನಿಯೊಂದು ಕಚೇರಿಗೆ ಕೆಲಸಕ್ಕೆ ಬರುವಂತೆ ಸೂಚಿಸಿದ ಬೆನ್ನಲ್ಲೇ ನೂರಾರು ಉದ್ಯೋಗಿಗಳು ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಮಕ್ಕಳ ಆನ್‌ಲೈನ್ … Continued

ಜನತಾ ಜಲಧಾರೆ: ಬೃಹತ್‌ ಸಮಾವೇಶದಲ್ಲಿ ಜೆಡಿಎಸ್‌ನಿಂದ ಚುನಾವಣಾ ಕಹಳೆ

ನೆಲಮಂಗಲ (ಬೆಂಗಳೂರು): ಮುಂದಿನ ಜೂನ್‌, ಜುಲೈ ತಿಂಗಳಿನಲ್ಲಿ ಮತ್ತೊಂದು ಸುತ್ತಿನ ರಥ ಯಾತ್ರೆ ಮಾಡುತ್ತೇನೆ. ಮೂರು ತಿಂಗಳ ಕಾಲ ಹಳ್ಳಿ ಹಳ್ಳಿಗಳಿಗೆ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಾಡಿನ ಜನತೆಯ ಹಿತವನ್ನು ದೃಷ್ಟಿಯಲ್ಲಿ ಪಂಚರತ್ನ ಯೋಜನೆಗಳನ್ನು ರೂಪಿಸಿ ಜನತೆಯ ಮುಂದೆ … Continued

ಸ್ಥಳೀಯ ಸಂಸ್ಥೆ ಚುನಾವಣೆ-ಒಬಿಸಿಗಳಿಗೆ ಮೀಸಲಾತಿ ನಿಗದಿಗೆ ಸಮಯ ಕೋರಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಲು ಸರ್ಕಾರದ ಚಿಂತನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಆದೇಶದ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಾಕಿ ಇರುವ ಕರ್ನಾಟಕದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ನಿಗದಿಪಡಿಸಲು ಇಲ್ಲಿಯವರೆಗೆ ಇದ್ದ ಮೀಸಲಾತಿಯಂತೆ ಹೋಗಲು ಅವಕಾಶಕ್ಕಾಗಿ ಮನವಿ ಮಾಡಲು ಅಥವಾ ಸಮಯ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲು ಸರ್ಕಾರ ಚಿಂತಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ … Continued

ಕಟ್ಟಡದ 8 ಮಹಡಿ ಏರಿ ನೇತಾಡುತ್ತಿದ್ದ ಪುಟ್ಟ ಮಗುವನ್ನು ಕಾಪಾಡಿದ ವ್ಯಕ್ತಿ…| ವೀಕ್ಷಿಸಿ

8ನೇ ಮಹಡಿ ಕಿಟಕಿಯಲ್ಲಿ ನೇತಾಡುತ್ತಿದ್ದ ಮಗುವನ್ನು ರಕ್ಷಿಸಲು ವ್ಯಕ್ತಿಯೊಬ್ಬ ಟವರ್ ಮೇಲೆ ಹತ್ತಿದ ವೀಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ. ಕಝಾಕಿಸ್ತಾನ್‌ನಲ್ಲಿ ಈ ಘಟನೆ ನಡೆದಿದ್ದು, ಸಾಬಿತ್ ಶೊಂಟಕ್‌ಬೇವ್ ಎಂಬ ವ್ಯಕ್ತಿ ಟವರ್ ಬ್ಲಾಕ್‌ನ 8ನೇ ಮಹಡಿ ಕಿಟಕಿಯಿಂದ ನೇತಾಡುತ್ತಿರುವ ಪುಟ್ಟ ಮಗುವನ್ನು ರಕ್ಷಿಸಿದ್ದಾನೆ. ಈ ವೀಡಿಯೊವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಗುಡ್ ನ್ಯೂಸ್ ವರದಿಗಾರರಿಂದ ಟ್ವಿಟರ್‌ನಲ್ಲಿ … Continued

ಮಾನ್ಸೂನ್ : ವಾಡಿಕೆ ದಿನಾಂಕಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸುವ ಸಾಧ್ಯತೆ ಎಂದ ಹವಾಮಾನ ಇಲಾಖೆ

ನವದೆಹಲಿ: ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲಾದ ನೈಋತ್ಯ ಮಾನ್ಸೂನ್ ಸಾಮಾನ್ಯ ವಾಡಿಕೆ ದಿನಾಂಕಕ್ಕಿಂತ ಮುಂಚಿತವಾಗಿ ಮೇ 27 ರ ವೇಳೆಗೆ ಕೇರಳಕ್ಕೆ ಮೊದಲ ಮಳೆಯನ್ನು ತರುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಶುಕ್ರವಾರ ಪ್ರಕಟಿಸಿದೆ. ಕೇರಳದಲ್ಲಿ ಮಾನ್ಸೂನ್‌ನ ಸಾಮಾನ್ಯ ಆರಂಭದ ದಿನಾಂಕ ಜೂನ್ 1 ಆಗಿದೆ. ಈ ವರ್ಷ, ಕೇರಳದ ಮೇಲೆ … Continued

ಜಮ್ಮು -ಕಾಶ್ಮೀರದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನ ಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್‌ ವಿಂಗಡಣೆ ಕುರಿತ ಅಧಿಸೂಚನೆ ಪ್ರಶ್ನಿಸಿರುವ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ತಿಳಿಸಲು ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಕೇಂದ್ರಾಡಳಿತ ಪ್ರದೇಶದಲ್ಲಿನ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು 107 ರಿಂದ 114ಕ್ಕೆ … Continued

ಟ್ವಿಟ್ಟರ್ ಒಪ್ಪಂದ ತಡೆಹಿಡಿಯಲಾಗಿದೆ ಎಂದ ಎಲೋನ್ ಮಸ್ಕ್ ..! ಇದು ನಿಜವೋ -ತಮಾಷೆಯೋ ಎಂಬ ಬಗ್ಗೆ ಖಚಿತತೆಯಿಲ್ಲ

ವಾಷಿಂಗ್ಟನ್: ಎಲೋನ್ ಮಸ್ಕ್ ಟ್ವಿಟರ್ ಅನ್ನು ಖರೀದಿಸದಿರಬಹುದು. ಆದರೆ ಟೆಸ್ಲಾ ಸಿಇಒ ತನ್ನ ಇತ್ತೀಚಿನ ಟ್ವೀಟ್‌ನಲ್ಲಿ $44 ಶತಕೋಟಿ ಟ್ವಿಟರ್ ಒಪ್ಪಂದವು “ಹೋಲ್ಡ್” ನಲ್ಲಿದೆ ಎಂದು ಹೇಳಿದ್ದಾರೆ. ಮಸ್ಕ್ ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್ ಅನ್ನು ಕಳೆದ ತಿಂಗಳು $44 ಶತಕೋಟಿಗೆ ಖರೀದಿಸಲು ಮುಂದಾದರು. ಮುಂಬರುವ ತಿಂಗಳುಗಳಲ್ಲಿ ಒಪ್ಪಂದವನ್ನು ಮುಕ್ತಾಯಗೊಳಿಸಲು ಮಸ್ಕ್ ಮತ್ತು ಟ್ವಿಟರ್ ಒಪ್ಪಂದದಲ್ಲಿದೆ ಎಂಬುದರಲ್ಲಿ … Continued

ಕಾಶ್ಮೀರದಲ್ಲಿ 3 ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ:ಇದರಲ್ಲಿ ಇಬ್ಬರು ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹಂತಕರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಬ್ರಾರ್ ಅರಗಂ ಪ್ರದೇಶದಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಈ ಮೂವರಲ್ಲಿ ಇಬ್ಬರು ಗುರುವಾರ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಅವರ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಲಿಂದರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು … Continued