ಜನತಾ ಜಲಧಾರೆ: ಬೃಹತ್‌ ಸಮಾವೇಶದಲ್ಲಿ ಜೆಡಿಎಸ್‌ನಿಂದ ಚುನಾವಣಾ ಕಹಳೆ

posted in: ರಾಜ್ಯ | 0

ನೆಲಮಂಗಲ (ಬೆಂಗಳೂರು): ಮುಂದಿನ ಜೂನ್‌, ಜುಲೈ ತಿಂಗಳಿನಲ್ಲಿ ಮತ್ತೊಂದು ಸುತ್ತಿನ ರಥ ಯಾತ್ರೆ ಮಾಡುತ್ತೇನೆ. ಮೂರು ತಿಂಗಳ ಕಾಲ ಹಳ್ಳಿ ಹಳ್ಳಿಗಳಿಗೆ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು.
ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಾಡಿನ ಜನತೆಯ ಹಿತವನ್ನು ದೃಷ್ಟಿಯಲ್ಲಿ ಪಂಚರತ್ನ ಯೋಜನೆಗಳನ್ನು ರೂಪಿಸಿ ಜನತೆಯ ಮುಂದೆ ಹೋಗುತ್ತಿದ್ದೇವೆ. ನಮಗೆ ಒಂದು ಬಾರಿ ಪೂರ್ಣ ಬಹುಮತದ ಸರ್ಕಾರವನ್ನು ನೀಡಿ. ನಾವು ನೀಡಿದ ಭರವಸೆಗಳನ್ನು ಈಡೇರಿಸದೇ ಇದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇವೆ ಎಂದು ಹೇಳಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ನಮ್ಮ ಪಕ್ಷದ ಯುವಕರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಮುಂದೆ ಆ ಶ್ರಮಕ್ಕೆ ನೀವು ನಾಯಕರಾಗುತ್ತೀರಿ. ಮುಂದಿನ ದಿನಗಳಲ್ಲಿ ಕಲಬುರಗಿ ಅಥವಾ ಬೆಳಗಾವಿಯಲ್ಲಿ ಒಂದು ಸಮಾರಂಭ ಮಾಡಿ ಒಂದು ಲಕ್ಷಕ್ಕೂ ಅಧಿಕ ಮಂದಿ ಯುವಕರನ್ನು ಒಳಗೊಂಡ ಬೃಹತ್‌ ಸಮಾವೇಶ ಮಾಡುವ ಉದ್ದೇಶ ಇದೆ ಎಂದು ಹೇಳಿದರು.
ಇದಕ್ಕೂ ಮೊದಲು ಮಾತನಾಡಿದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು, ಜೆಡಿಎಸ್‌ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ ಪಕ್ಷ. ನಮ್ಮ ಪಕ್ಷ ರೈತರಿಗಾಗಿ, ನೀರಾವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ನಾನು ಪ್ರಧಾನಿಯಾಗಿದ್ದ ವೇಳೆಯಲ್ಲಿ ನಾಡಿನ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೆ ಎಂದು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ದಿ ಹಿಂದೂ ಸಂಗೀತ ಸ್ಪರ್ಧೆ: ಬಾಲಪ್ರತಿಭೆ ವಿಭಾಗದಲ್ಲಿ ಕುಮಟಾದ ಅದಿತಿ ಶಾನಭಾಗ ಪ್ರಥಮ

ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಮಾತನಾಡಿ, ಕುಮಾರಸ್ವಾಮಿ ಅವರು ಮತ್ತೊಮ್ಮೆ ಈ ನಾಡಿನ ಮುಖ್ಯಮಂತ್ರಿಯಾಗಬೇಕು. ಅವರು, ದೇವೇಗೌಡರು ಈ ನಾಡಿಗೆ ನೀಡಿರುವ ಕೊಡುಗೆ ಅಪಾರವಾದದ್ದು, ನಾನು ಮುಂದಿನ ದಿನಗಳಲ್ಲಿ ಬಸವ ಕಲ್ಯಾಣ, ಬಸವನ ಬಾಗೇವಾಡಿ, ಕಲಬುರಗಿಯಲ್ಲಿ ಪ್ರಚಾರ ಆರಂಭ ಮಾಡಲಿದ್ದೇನೆ ಎಂದು ತಿಳಿಸಿದರು.
ನಂಜಾವಧೂತ ಸ್ವಾಮೀಜಿ ಮಾತನಾಡಿದರು. ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ್ದ ಲಕ್ಷಾಂತರ ಮಂದಿ ಕಾರ್ಯಕರ್ತರು ಆಗಮಿಸಿದ್ದರು. ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು, ಕಡೆಯಲ್ಲಿ ವಾರಣಾಸಿಯ ಆಚಾರ್ಯರಿಂದ ವಿಶೇಷ ಗಂಗಾರತಿ ಕಾರ್ಯಕ್ರಮ ನಡೆಯಿತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement