ತಾಜ್‌ ಕೊಠಡಿ ತೆರೆಯಲು ಕೋರಿದ್ದ ಮನವಿ ವಜಾಗೊಳಿಸಿದ ಅಲಾಹಾಬಾದ್ ಹೈಕೋರ್ಟ್

ನವದೆಹಲಿ: ತಾಜ್‌ಮಹಲ್‌ನ ಕೆಲ ಕೊಠಡಿಗಳನನು ತೆರೆಯುವಂತೆ ನಿರ್ದೇಶಿಸಬೇಕು ಎಂದು ಕೋರಿದ್ದ ಮನವಿಯನ್ನು ಅಲಾಹಾಬಾದ್‌ ಹೈಕೋರ್ಟ್‌ ವಜಾಗೊಳಿಸಿದೆ.
ಮಾಹಿತಿ ಸ್ವಾತಂತ್ರ್ಯದಡಿ ಸ್ಮಾರಕದ ಕೊಠಡಿಗಳನ್ನು ತೆರಯಲು ಅನುಮತಿಸಬೇಕು ಎಂಬ ಅರ್ಜಿದಾರರ ಕೋರಿಕೆಗೆ ನ್ಯಾಯಮೂರ್ತಿಗಳಾದ ಡಿ ಕೆ ಉಪಾಧ್ಯಾಯ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿತು. “ನಾಳೆ ನೀವು ಬಂದು ನಮ್ಮನ್ನು ಗೌರವಾನ್ವಿತ ನ್ಯಾಯಮೂರ್ತಿಗಳ ಕೊಠಡಿಗೆ ಹೋಗುವಂತೆ ಹೇಳುತ್ತೀರಾ? ದಯವಿಟ್ಟು, ಪಿಐಎಲ್ ವ್ಯವಸ್ಥೆಯನ್ನು ಅಪಹಾಸ್ಯ ಮಾಡಬೇಡಿ” ಎಂದು ಅದು ಎಚ್ಚರಿಸಿತು ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.
ಬಿಜೆಪಿ ಅಯೋಧ್ಯಾ ಘಟಕದ ಮಾಧ್ಯಮ ಮುಖ್ಯಸ್ಥರಾದ ಅರ್ಜಿದಾರ ಡಾ. ರಜನೀಶ್‌ ಸಿಂಗ್‌ “ಮುಚ್ಚಿದ ಕೋಣೆಗಳ ಬಗ್ಗೆಯಷ್ಟೇ ನಮ್ಮ ಕಾಳಜಿ. ಆ ಬಾಗಿಲುಗಳ ಹಿಂದೆ ಏನಿದೆ ಎಂದು ಎಲ್ಲರಿಗೂ ತಿಳಿಯಬೇಕು” ಎಂದು ಅರ್ಜಿಯಲ್ಲಿ ಹೇಳಿದ್ದರು.
ಅರ್ಜಿ ಅಲಾಹಾಬಾದ್‌ ಹೈಕೋರ್ಟ್‌ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರ್ಕಾರ ವಿರೋಧ ವ್ಯಕ್ತಪಡಿಸಿತು. ಆಗ ನ್ಯಾಯಾಲಯ ಕೂಡ “ಇದೆಲ್ಲಾ ನ್ಯಾಯಾಲಯದಲ್ಲಿ ಚರ್ಚಿಸುವಂತಹ ವಿಷಯವೇ? ನಾವು ಅಂತಹ ಸಂಗತಿಗಳ ಬಗಗೆ ತರಬೇತಿ ಪಡೆದು ಸಿದ್ಧರಾಗಿದ್ದೇವೆ ಎಂದು ಭಾವಿಸುವಿರೇ?” ಎಂದು ಪ್ರಶ್ನಿಸಿತು.
ಮಾಹಿತಿ ಹಕ್ಕು” ಕುರಿತು ಅರ್ಜಿದಾರರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ತಾವು ಕೋರಿರುವ ಅಧ್ಯಯನಕ್ಕೂ ಮಾಹಿತಿ ಹಕ್ಕಿಗೂ ಯಾವುದೇ ರೀತಿಯ ನಂಟು ಇದೆಯೇ?” ಎಂದು ಕೇಳಿತು.
ದಯವಿಟ್ಟು ಎಂ ಎ ಅಧ್ಯಯನ ಮಾಡಿ. ನಂತರ ಎನ್‌ಇಟಿ ಜೆಆರ್‌ಎಫ್‌ ತೇರ್ಗಡೆಯಾಗಿ. ಸಂಶೋಧನೆ ಮಾಡಲು ಯಾವುದೇ ವಿಶ್ವವಿದ್ಯಾಲಯ ನಿರಾಕರಿಸಿದರೆ ನಮ್ಮ ಬಳಿ ಬನ್ನಿ” ಎಂದು ಪೀಠ ಅರ್ಜಿದಾರರಿಗೆ ಕುಟುಕಿತು

ಪ್ರಮುಖ ಸುದ್ದಿ :-   ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement