ಪ್ರಿಯತಮ ಅಪಘಾತದಲ್ಲಿ ಸಾವು, ಆಘಾತದಿಂದ ಪ್ರಿಯತಮೆ ಆತ್ಮಹತ್ಯೆಗೆ ಶರಣು

ತುಮಕೂರು: ಇಬ್ಬರು ಯುವ ಪ್ರೇಮಿಗಳು ಸತಿ-ಪತಿಗಳಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ ವಿಧಿ ಬೇರೆಯದನ್ನೇ ಬಗೆದಿತ್ತು.. ಪ್ರಿಯಕರ ಅಪಘಾತದಲ್ಲಿ ಮೃತಪಟ್ಟಿದ್ದಾನೆ, ಆ ಸುದ್ದಿ ಕೇಳಿದ ಪ್ರಿಯತೆಮೆಯೂ ಆಘಾತದಿಂದ ಆತ್ಮಹತ್ಯೆಗೆ ಶರಣಾಗಿರುವ ದುರಂತದ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.

ತುಮಕೂರು ತಾಲೂಕಿನ ಮಸ್ಕಲ್ ಗ್ರಾಮದ ಧನುಷ್ (23) ಹಾಗೂ ಅರೆಹಳ್ಳಿ ಗ್ರಾಮದ ಸುಷ್ಮಾ (22) ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯವನ್ನು ತಮ್ಮ ಮನೆಯಲ್ಲಿ ಹೇಳಿದ ನಂತರ ಅವರ ಮದುವೆಗೂ ಮನೆಯವರು ಒಪ್ಪಿದ್ದರು. ಆದರೆ ವಿಧಿಯಾಟ ಬೇರೆಯಾಗಿತ್ತು. ಮೇ 11ರಂದು ಊರಿನ ಜಾತ್ರೆಗೆ ಬರುವಾಗ ನೆಲಮಂಗಲದ ಬಳಿಯ ಕುಲುವನಹಳ್ಳಿ ಬಳಿಯಲ್ಲಿ ಅಪಘಾತ ಸಂಭವಿಸಿ ಧುನುಷ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಿಸದೆ ಅವರು ಸಾವಿಗೀಡಾಗಿದ್ದರು.
ಈ ವಿಷಯ ತಿಳಿಯುತ್ತಿದ್ದಂತ ಪ್ರಿಯತಮೆ ಸುಷ್ಮಾ ಮಾನಸಿಕವಾಗಿ ಆಘಾತಗೊಂಡಿದ್ದಾಳೆ. ತನ್ನ ಪ್ರಿಯಕರನ ಅಂತ್ಯಸಂಸ್ಕಾರದಲ್ಲೂ ಭಾಗಿಯಾಗಿದ್ದ ಸುಷ್ಮಾ ಅನಂತರ ತೀವ್ರ ಖಿನ್ನತೆಗೆ ಒಳಗಾಗಿದ್ದಳು. ಧನುಷ್ ಅಂತ್ಯಕ್ರಿಯೆ ಮುಗಿಸಿ ಬಂದ ನಂತರ ತಮ್ಮ ಮನೆಯಲ್ಲಿ, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಂತರ ಅವಳ ಅಂತ್ಯಕ್ರಿಯೆಯನು ಪ್ರಿಯಕರನ ಅಂತ್ಯಕ್ರಿಯೆ ಮಾಡಿದ ಸ್ಥಳದ ಪಕ್ಕದಲ್ಲಿಯೇ ಮಾಡಲಾಯಿತು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement