ಕಾರು ಡಿಕ್ಕಿ: ಏಳು ಎಮ್ಮೆಗಳು ಸ್ಥಳದಲ್ಲೇ ಸಾವು

ಶಿವಮೊಗ್ಗ: ಗಾಡಿಕೊಪ್ಪದ ತುಂಗಾ ನಾಲೆ ಬಳಿ ಕಾರು ಡಿಕ್ಕಿ ಹೊಡೆದು ಏಳು ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ವರದಿಯಾಗಿದೆ.
ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ

. ರಸ್ತೆ ಮಧ್ಯೆ ಎಮ್ಮೆಗಳು ಒಮ್ಮೆಗೇ ಬಂದಿದ್ದರಿಂದ ಚಾಲಕನಿಗೆ ಅದು ಗೊತ್ತಾಗದೆ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ., ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಆದರೆ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಬಚಾವ್‌ ಆಗಿದ್ದಾರೆ ಎಂದು ಹೇಳಲಾಗಿದೆ.
ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಮ್ಮೆಗಳ ಮಾಲೀಕರ ಪತ್ತೆ ಕಾರ್ಯ ನಡೆಯುತ್ತಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement