ಮೈಸೂರು: ರಾತ್ರಿ ಭಾರೀ ಮಳೆ, ಬೆಳ್ಳಂಬೆಳಿಗ್ಗೆ ಕೊಚ್ಚಿಹೋದ ಸೇತುವೆ

ಮೈಸೂರು: ಸೋಮವಾರ  ರಾತ್ರಿ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಯೊಂದರ ಸೇತುವೆಯೇ ಕೊಚ್ಚಿಹೋಗಿದೆ.
ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ನಗರದ ಬೋಗಾದಿ ನಾಗಲಿಂಗೇಶ್ವರ ದೇವಸ್ಥಾನದ ಸಮೀಪದ (ಅಮೃತನಂದಮಯಿ ಶಾಲೆಯ ಹಿಂಭಾಗ) ಇರುವ ಸೇತುವೆ ಕೊಚ್ಚಿ ಹೋಗಿದೆ.ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದ್ದು, ರಸ್ತೆ ಕುಸಿತಗೊಂಡಿದೆ.

ನಗರದಲ್ಲಿ ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಬೋಗಾದಿ ಕೆರೆ ಉಕ್ಕಿ ಹರಿಯುತ್ತಿದ್ದು, ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಆನಂದ ನಗರ ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದೆ. ಬಹುತೇಕ ನಿವಾಸಿಗಳು ನಿನ್ನೆಯಿಂದ ಮನೆಯೊಳಗೇ ಇದ್ದಾರೆ. ಮಳೆ ನೀರು ಮನೆಯ ಗೇಟ್‌ವರೆಗೂ ತುಂಬಿದ್ದು, ಮಂಗಳವಾರ ಮಳೆ ಮುಂದುವರಿದರೆ ನೀರು ಮನೆಗಳಿಗೆ ನುಗ್ಗುವ ಸಾಧ್ಯತೆ ದಟ್ಟವಾಗಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement