ಕಾರವಾರ: ಮೊಮ್ಮಗು ನೋಡಲು ಬಂದ ಅತ್ತೆಗೆ ಚಾಕುವಿನಿಂದ ಇರಿದ ಅಳಿಯ…!

ಕಾರವಾರ: ಮಗು ನೋಡಲು ಬಂದ ಪ್ರಿಯತಮೆಯ ತಾಯಿಗೆ ಕುಡಿದ ಅಮಲಿನಲ್ಲಿ ಆಸ್ಪತ್ರೆಯಲ್ಲೇ ಚಾಕು ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ದಾಂಡೇಲಿ ಮೂಲದ ರಮಜಾನ್ (25) ಎಂಬಾತ ತನ್ನ ಅತ್ತೆ ಕದ್ರಾದವಳಾದ ಮಹಮ್ಮದಬೀ ಎಂಬಾಕೆಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆ. ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣ ಎಂದು ಹೇಳಲಾಗಿದೆ.

ಮಹಮ್ಮದಬೀ ತನ್ನ ಮಗಳ ಮಗುವನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾಳೆ, ಆದರೆ ಈತ ಮಹಮ್ಮದೀ ಮಗಳನ್ನು ಕಾನೂನುಬದ್ಧವಾಗಿ ಹಾಗೂ ಸಂಪ್ರದಾಯ ಬದ್ಧವಾಗಿ ಮದುವೆಯಾಗಿಲ್ಲ ಎನ್ನಲಾಗಿದೆ. ಹೀಗಾಗಿ ಅತ್ತೆ ಹಾಗೂ ಅಳಿಯನಿಗೆ ಇದೇ ವಿಷಯಕ್ಕೆ ಜಗಳವಾಗಿದೆ ಎಂದು ಹೇಳಲಾಗಿದೆ. ಈ ಸಿಟ್ಟಿನಲ್ಲಿದ್ದ  ರಮಜಾನ್‌ ನನ್ನ ಮಗುವನ್ನ ನೋಡಲು ನೀವು ಯಾರು ಎಂದು ತಕರಾರು ತೆಗೆದು​ ಮಹಮ್ಮದಬೀ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಅಲ್ಲದೆ ಮದ್ಯದ ಅಮಲಿನಲ್ಲಿ ಆಕೆಯ ಹೊಟ್ಟೆಗೆ ಚಾಕುವಿನಿಂದ ಚುಚ್ಚಿದ್ದಾನೆ. ತಕ್ಷಣ ಅಲ್ಲೇ ಇದ್ದ ಜನರು ಆತನನ್ನು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement