ಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ತೆರವು ಕೋರಿದ್ದ ಅರ್ಜಿ ವಿಚಾರಣೆ ಯೋಗ್ಯ ಎಂದ ಮಥುರಾ ಜಿಲ್ಲಾ ನ್ಯಾಯಾಲಯ

ಲಕ್ನೋ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಥುರಾ ಶಾಹಿ ಈದ್ಗಾ ಮಸೀದಿಯನ್ನು ಕೃಷ್ಣ ಜನ್ಮಭೂಮಿ ಪ್ರದೇಶದಲ್ಲಿ ನಿರ್ಮಿಸಿರುವುದರಿಂದ ಅದನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯು ವಿಚಾರಣಾ ನಿರ್ವಹಣಾ ಯೋಗ್ಯ ಎಂದು ಜಿಲ್ಲಾ ನ್ಯಾಯಾಲಯ ತಿಳಿಸಿದೆ.
ಈ ಹಿಂದೆ ಮೊಕದ್ದಮೆ ವಜಾಗೊಳಿಸಿದ್ದ ಸಿವಿಲ್ ನ್ಯಾಯಾಲಯದ ಆದೇಶವನ್ನು ಜಿಲ್ಲಾ ನ್ಯಾಯಾಧೀಶ ರಾಜೀವ್ ಭಾರ್ತಿ ರದ್ದುಗೊಳಿಸಿದರು. “ಫಿರ್ಯಾದಿದಾರ ಮೊಕದ್ದಮೆ ಹೂಡುವ ಹಕ್ಕನ್ನು ಊರ್ಜಿತಗೊಳಿಸಲಾಗಿದೆ. ಪ್ರಕರಣವನ್ನು ಅದರ ಮೂಲ ಸಂಖ್ಯೆಗೆ ಮರಳಿಸಲಾಗುವುದು” ಎಂದು ನ್ಯಾಯಾಲಯ ಆದೇಶಿಸಿದೆ.

ವಜಾ ಆದೇಶ ಪ್ರಶ್ನಿಸಿ ಹಿಂದೂ ದೇವತೆಗಳಾದ ಭಗವಾನ್ ಶ್ರೀಕೃಷ್ಣ ವಿರಾಜಮಾನ್ ಮತ್ತು ಆಸ್ಥಾನ ಶ್ರೀ ಕೃಷ್ಣ ಜನ್ಮಭೂಮಿ ಪರವಾಗಿ ವಾದ ಮಿತ್ರರಾದ ರಂಜನಾ ಅಗ್ನಿಹೋತ್ರಿ ಮತ್ತಿತರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ.
ಕೃಷ್ಣ ಜನ್ಮಭೂಮಿ ಜಮೀನಿನಲ್ಲಿ ನಿರ್ಮಿಸಲಾಗಿದೆ ಎಂಬ ಕಾರಣಕ್ಕೆ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕಲು ಮಥುರಾ ನ್ಯಾಯಾಲಯದ ಮೊಕದ್ದಮೆಯನ್ನು ನಿರ್ವಹಿಸಬಹುದಾಗಿದೆ’ ಎಂದು ಕೋರ್ಟ್ ಹೇಳಿದೆ.

ಮಸೀದಿ ಈದ್ಗಾ ಟ್ರಸ್ಟ್‌ನೊಂದಿಗೆ ರಾಜಿ ಮಾಡಿಕೊಳ್ಳುವ ಅಧಿಕಾರ ಕೃಷ್ಣ ಜನ್ಮಭೂಮಿ ಸೇವಾ ಸಂಘಕ್ಕೆ ಇದೆಯೇ ಎಂಬುದು ಸಾಕ್ಷ್ಯದ ವಿಷಯವಾಗಿದ್ದು, ವಿಚಾರಣೆಯ ಸಮಯದಲ್ಲಿ ಎರಡೂ ಕಡೆಯವರು ಒದಗಿಸಿದ ಸಾಕ್ಷ್ಯದ ಆಧಾರದ ಮೇಲೆ ಮಾತ್ರ ನಿರ್ಧರಿಸಬಹುದು ಎಂದು ನ್ಯಾಯಾಲಯ ಗಮನಿಸಿದೆ. ಮೇ 26ರಿಂದ ವಿಚಾರಣೆ ಪುನರಾರಂಭವಾಗಲಿದೆ.
ಮೂರು ಮೊಕದ್ದಮೆಗಳಲ್ಲಿ, ಈ ಪ್ರಕರಣದಲ್ಲಿ, ಎರಡನೇ ಮೊಕದ್ದಮೆಯನ್ನು ಹಿಂದೂ ಸೇನಾ ಮುಖ್ಯಸ್ಥ ಮನೀಶ್ ಯಾದವ್ ಮತ್ತು ಮೂರನೆಯದನ್ನು ಇತರ ಐದು ಫಿರ್ಯಾದಿಗಳು ವಕೀಲ ಮಹೇಂದ್ರ ಪ್ರತಾಪ್ ಸಿಂಗ್ ಮೂಲಕ ಸಲ್ಲಿಸಿದ್ದಾರೆ.
1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣನ ಜನ್ಮಸ್ಥಳದ ಬಳಿಯಿರುವ ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ ನಿರ್ಮಿಸಲಾದ ಮಸೀದಿಯನ್ನು ತೆರವು ಮಾಡಲು ದಾವೆಗಳು ಒತ್ತಾಯಿಸಿವೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement