ಗ್ಯಾನವಾಪಿ ಮಸೀದಿಯಲ್ಲಿ ಪತ್ತೆಯಾದ ‘ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಗುಜರಾತ್ ಎಐಎಂಐಎಂ ನಾಯಕನ ಬಂಧನ

ಅಹಮದಾಬಾದ್ (ಗುಜರಾತ್): ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿರುವ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್‌ನ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ)ವಕ್ತಾರ ಡ್ಯಾನಿಶ್ ಖುರೇಷಿ ಅವರನ್ನು ಅಹಮದಾಬಾದ್ ಸೈಬರ್ ಕ್ರೈಮ್ ಬ್ರಾಂಚ್ ಬಂಧಿಸಿದೆ.

‘ಶಿವಲಿಂಗ’ದ ಮೇಲೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಖುರೇಷಿ ವಿರುದ್ಧ ವಿಶ್ವ ಹಿಂದೂ ಪರಿಷತ್ ದೂರು ದಾಖಲಿಸಿದೆ.
ಈ ವಾರದ ಆರಂಭದಲ್ಲಿ ಕಾಶಿ ಜ್ಞಾನವಾಪಿ ಮಸೀದಿಯಲ್ಲಿ ಮೂರು ದಿನಗಳ ಸಮೀಕ್ಷೆಯ ಸಮಯದಲ್ಲಿ ಪತ್ತೆಯಾದ ಗುಮ್ಮಟದ ಆಕಾರದ ರಚನೆಗೆ ಸಂಬಂಧಿಸಿ ಹಿಂದೂಗಳು ಶಿವಲಿಂಗ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದಾಗ್ಯೂ, ಪ್ರಕರಣದಲ್ಲಿ ಮುಸ್ಲಿಂ ಪಕ್ಷವು ಇದನ್ನು ತಳ್ಳಿಹಾಕಿದ್ದು, ರಚನೆಯು ವಾಸ್ತವವಾಗಿ ಕಾರಂಜಿಯಾಗಿದೆ ಎಂದು ಹೇಳಿದೆ.
‘ಶಿವಲಿಂಗ’ ಇರುವ ಪ್ರದೇಶವನ್ನು ಮುಸ್ಲಿಮರು ಪ್ರವೇಶಿಸುವ ಮತ್ತು ಪೂಜಿಸುವುದಕ್ಕೆ ಅಡ್ಡಿಯಾಗದಂತೆ ರಕ್ಷಿಸುವಂತೆ ವಾರಾಣಸಿ ಜಿಲ್ಲಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.
“ಖುರೇಷಿಗೆ ಸೇರಿದ ಟ್ವಿಟರ್ ಹ್ಯಾಂಡಲ್‌ನಿಂದ ಹಿಂದೂ ದೇವರು ಮತ್ತು ದೇವತೆಗಳ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿರುವುದು ಸೈಬರ್ ತಂಡದ ಗಮನಕ್ಕೆ ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್....: 9 ಮಂದಿ 'ಪಾಕಿಸ್ತಾನ ಗೂಢಚಾರರ' ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement