ಗದಗ: ಮದುವೆಯಾಗಲು ಹುಡುಗಿ ನೋಡಿಕೊಂಡು ವಾಪಸ್ ಬರುತ್ತಿದ್ದಾಗ ಯುವಕನೊಬ್ಬ ಮಾರ್ಗಮಧ್ಯೆ ಹಳ್ಳದ ನೀರಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕಲಾಸಪುರ ಗ್ರಾಮದಲ್ಲಿ ನಡೆದಿದೆ.
ಟಿಪ್ಪು ಸುಲ್ತಾನ್ (26) ಮೃತ ದುರ್ದೈವಿ. ಗುರುವಾರ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಯುವಕ ಸಂಜೆ ವಾಪಸ್ ಊರಿಗೆ ಹಿಂತಿರುಗುತ್ತಿದ್ದ ಎಂದು ಹೇಳಲಾಗಿದೆ.
ಈ ವೇಳೆ ಹಳ್ಳದ ನೀರಲ್ಲಿ ಕೊಚ್ಚಿಹೋಗಿ ಮುಳ್ಳಿನ ಕಂಟಿಯಲ್ಲಿ ಸಿಲುಕಿದ್ದ ಟಿಪ್ಪು ಸುಲ್ತಾನ್ ಮೃತದೇಹವನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರ ತೆಗೆದಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/advertisement
ನಿಮ್ಮ ಕಾಮೆಂಟ್ ಬರೆಯಿರಿ