ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ಹೆಂಡತಿಗೆ ಕತ್ತಿಯಿಂದ ಹೊಡೆದುಕೊಂದ ಗಂಡ

ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಹೆಂಡತಿ ಮೇಲೆ ಗಂಡ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಹೆಂಡತಿ ಸಾವಿಗೀಡಾದ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗೋಡ್‌ಮನೆಯಲ್ಲಿ ಶುಕ್ರವಾರ (ಮೇ 20)
ನಡೆದ ಬಗ್ಗೆ ವರದಿಯಾಗಿದೆ.
ಮೃತ ಮಹಿಳೆಯನ್ನು ನಾಗರತ್ನ ಮಂಜುನಾಥ ಚನ್ನಯ್ಯ (38) ಎಂದು ಗುರುತಿಸಲಾಗಿದೆ.

ಮಂಜುನಾಥ ಕೇರಿಯ ಚೆನ್ನಯ್ಯ ಎನ್ನುವವರ ವಿರುದ್ಧ ಠಾಣೆಯಲ್ಲಿ ದೂರು ದಾಖಲಾಗಿದೆ ವಿಪರೀತ ಸಾರಾಯಿ ಕುಡಿಯುವ ಹವ್ಯಾಸ ರೂಢಿಸಿಕೊಂಡಿದ್ದ ಮಂಜುನಾಥ ಆಗಾಗ ಹೆಂಡತಿಯ ಜೊತೆ ಜಗಳ ಮಾಡುತ್ತಿದ್ದ ಎಂದು ಹೇಳಲಾಗಿದೆ. ಶುಕ್ರವಾರ ಬೆಳಿಗ್ಗೆ ಎಂದಿನಂತೆ ಗಂಡ ಹೆಂಡತಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಸಿಟ್ಟಿಗೆದ್ದ ಮಂಜುನಾಥ ಮನೆಯ ಜಗಲಿ ಕಟ್ಟೆ ಮೇಲೆ ಹೂವು ಕಟ್ಟುತ್ತಾ ಕುಳಿತಿದ್ದ ಹೆಂಡತಿಯ ಕುತ್ತಿಗೆಗೆ ಹಾಗೂ ತಲೆಗೆ ಕತ್ತಯಿಂದ ಹಲ್ಲೆ ನಡೆಸಿ ಹಲ್ಲೆ ನಡೆಸಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ಹೊಡೆತದ ತೀವ್ರತೆಗೆ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದು, ಕೊಲೆ ಬಳಿಕ  ಗಂಡ ಪರಾರಿಯಾಗಿದ್ದ  ಪಕ್ಕದ ಅರಣ್ಯ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿದ್ಧಾಪುರ ಠಾಣಾ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement