ಭಟ್ಕಳ: ಆಟ ಆಡುತ್ತಿದ್ದಾಗ ಮಳೆ ನೀರಿನ ಕಾಲುವೆಗೆ ಬಿದ್ದು 4 ವರ್ಷದ ಮಗು ಸಾವು

ಭಟ್ಕಳ: ಮನೆಯ ಹಿಂದುಗಡೆ ಆಟವಾಡುತ್ತಿದ್ದ ಬಾಲಕ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ಬಾಲಕನನ್ನು ವಿಜೇತ ನಾಯ್ಕ (4) ಎಂದು ಗುರುತಿಸಲಾಗಿದೆ. ಶುಕ್ರವಾರ ಅಂಗನವಾಡಿಗೆ ಹೋಗಿದ್ದ ಬಾಲಕ ಮಧ್ಯಾಹ್ನ ಮನೆಗೆ ಬಂದಿದ್ದಾನೆ. ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡುತ್ತಿದ್ದ ಎಂದು ಹೇಳಲಾಗಿದೆ.

ಈ ಸಮಯದಲ್ಲಿ ಆಕಸ್ಮಿಕವಾಗಿ ಮಳೆ ನೀರು ಹರಿಯುವ ಕಾಲುವೆಗೆ ಬಿದ್ದ ನೀರು ಕುಡಿದಿದ್ದಾನೆ. ತಕ್ಷಣವೇ ಗಮನಿಸಿದ ತಾಯಿ ಶಿರಾಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾಳೆ. ಆದರೆ ಅಷ್ಟರಲ್ಲೇ ಬಾಲಕ ಮೃತ ಪಟ್ಟಿರುವ ಬಗ್ಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಮೃತ ಬಾಲಕನ ತಂದೆ ಗಣಪತಿ ಕೃಷ್ಣಾ ನಾಯ್ಕ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement