ಜಿಲ್ಲೆಯ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ಹಿಂಸಾಚಾರ : ಆಂಧ್ರಪ್ರದೇಶ ಸಚಿವರ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಹೈದರಾಬಾದ್: ಕೋನಸೀಮಾ ಜಿಲ್ಲೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಕೋನಸೀಮಾ ಜಿಲ್ಲೆ ಎಂದು ಮರುನಾಮಕರಣ ಮಾಡುವ ಆಂಧ್ರಪ್ರದೇಶ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಅಮಲಾಪುರಂನಲ್ಲಿ ಮಂಗಳವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹಲವು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಪೊಲೀಸ್ ವಾಹನ ಮತ್ತು ಖಾಸಗಿ ಬಸ್‌ಗೆ ಬೆಂಕಿ ಹಚ್ಚಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ರಾಜ್ಯ ಸಾರಿಗೆ ಸಚಿವ ಪಿನಿಪೆ ವಿಶ್ವರೂಪ ಅವರ ಮನೆಗೂ ನುಗ್ಗಿದ ಪ್ರತಿಭಟನಾಕಾರರು ಪೀಠೋಪಕರಣಗಳಿಗೆ ಬೆಂಕಿ ಹಚ್ಚಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಬಳಿಕ ಪರಿಸ್ಥಿತಿ ಹತೋಟಿಗೆ ಬಂದಿದೆ. ಅವರಲ್ಲಿ ಹಲವರನ್ನು ಬಂಧಿಸಿ ಪೊಲೀಸ್ ಠಾಣೆಗೆ ಎಳೆದೊಯ್ಯಲಾಯಿತು.

ಇದಕ್ಕೂ ಮುನ್ನ ಕೋಣಸೀಮ ರಕ್ಷಣಾ ಸಮಿತಿ, ಕೋಣಸೀಮ ಸಾಧನಾ ಸಮಿತಿ, ಕೋಣಸೀಮ ಉದ್ಯಮ ಸಮಿತಿ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ಸಾವಿರಾರು ಜನರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ವಾತಾವರಣ ಉದ್ವಿಗ್ನಗೊಂಡಿದ್ದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಸ್ವಲ್ಪದರಲ್ಲೇ ನಿಯಂತ್ರಣ ತಪ್ಪಿತು. ಕಳೆದ ವಾರ, ಜಿಲ್ಲೆಯ ಮರುನಾಮಕರಣದ ಪ್ರಸ್ತಾಪದ ವಿರುದ್ಧ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೋನಸೀಮಾ ಜಿಲ್ಲೆಯಲ್ಲಿ ಸೆಕ್ಷನ್ 144 ವಿಧಿಸಲಾಗಿತ್ತು.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

ಕೆಲವು ರಾಜಕೀಯ ಪಕ್ಷಗಳು ಮತ್ತು ಸಮಾಜ ವಿರೋಧಿಗಳು ಬೆಂಕಿ ಹಚ್ಚಲು ಪ್ರಚೋದನೆ ನೀಡಿದ್ದಾರೆ ಎಂದು ಗೃಹ ಸಚಿವ ತಾನೆಟಿ ವನಿತಾ ಆರೋಪಿಸಿದ್ದಾರೆ. “ಘಟನೆಯಲ್ಲಿ 20 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವುದು ದುರದೃಷ್ಟಕರ. ನಾವು ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸುತ್ತೇವೆ ಮತ್ತು ತಪ್ಪಿತಸ್ಥರನ್ನು ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಏಪ್ರಿಲ್ 4 ರಂದು, ಹೊಸ ಕೋನಸೀಮಾ ಜಿಲ್ಲೆಯನ್ನು ಹಿಂದಿನ ಪೂರ್ವ ಗೋದಾವರಿಯಿಂದ ಬೇರ್ಪಡಿಸಿ ರಚನೆ ಮಾಡಲಾಯಿತು, ಅಮಲಾಪುರಂ ಅದರ ಕೇಂದ್ರ ಕಚೇರಿಯಾಗಿದೆ. ಹನ್ನೆರಡು ಇತರ ಜಿಲ್ಲೆಗಳನ್ನು ಸಹ ರಚಿಸಲಾಯಿತು, ಇದು ರಾಜ್ಯದ ಒಟ್ಟು ಜಿಲ್ಲೆಗಳ ಸಂಖ್ಯೆಯನ್ನು 26 ಕ್ಕೆ ಒಯ್ದಿದೆ.
ಕಳೆದ ವಾರ ಕೋಣಸೀಮೆಯನ್ನು ಬಿಆರ್ ಅಂಬೇಡ್ಕರ್ ಕೋಣಸೀಮ ಜಿಲ್ಲೆ ಎಂದು ಮರುನಾಮಕರಣ ಮಾಡಲು ಕೋರಿ ಸರ್ಕಾರ ಪ್ರಾಥಮಿಕ ಅಧಿಸೂಚನೆ ಹೊರಡಿಸಿ ಜನರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು.
ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸರ್ಕಾರದ ನಿರ್ಧಾರವು ವಿವಿಧ ಪಕ್ಷಗಳು, ದಲಿತ ಗುಂಪುಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಬೇಡಿಕೆಗಳ ನಂತರ ಜಿಲ್ಲೆಯನ್ನು ಭಾರತೀಯ ಸಂವಿಧಾನದ ಶಿಲ್ಪಿಯ ಹೆಸರನ್ನು ಮರುನಾಮಕರಣದ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿದೆ.

ಪ್ರಮುಖ ಸುದ್ದಿ :-   ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ...! ಇದರ ಬಗ್ಗೆ ಗೊತ್ತೆ..?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement