ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕುಂದಾಪುರ: ಹಿರಿಯ ಉದ್ಯಮಿ ಕಟ್ಟೆ ಭೋಜಣ್ಣ (80) ಬುಧವಾರ ಬೆಳಿಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕಟ್ಟೆ ಭೋಜಣ್ಣ ಅವರು ಬೆಂಗಳೂರಿನಲ್ಲಿ ಹಲವಾರು ಹೋಟೆಲ್, ಬಟ್ಟೆ ಅಂಗಡಿಗಳನ್ನು ಹೊಂದಿದ್ದು. ಕುಂದಾಪುರದ ಹೆಸರಾಂತ ಚಿನ್ಮಯಿ ಆಸ್ಪತ್ರೆ ಮಾಲೀಕರೂ ಆಗಿದ್ದರು.ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement