ಬಾಗಲಕೋಟೆ: ತಲೆಗೂದಲಿಗೆ ಬಣ್ಣ ಹಾಕುವ ದರದ ವಿಚಾರದಲ್ಲಿ ಜಗಳ, ಗ್ರಾಹಕನ ಎದೆಗೆ ಇರಿದು ಕೊಲೆ ಮಾಡಿದ ಕ್ಷೌರಿಕ

ಬಾಗಲಕೋಟೆ: ಸಲೂನ್​​​ನಲ್ಲಿ ತಲೆ ಕೂದಲಿಗೆ ಕಲರ್ ಹಾಕುವ ಬೆಲೆಯ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದಲ್ಲಿ ಗುರುವಾರ (ಮೇ 26) ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಸಾಗರ ಅವಟಿ (22) ಕೊಲೆಯಾದ ಯುವಕ ಎಂದು ಗರುತಿಸಲಾಗಿದೆ.
ಸದಾಶಿವ ನಾವಿ ಕೊಲೆ ಮಾಡಿದ ಕ್ಷೌರಿಕ ಎಂದು ಹೇಳಲಾಗಿದೆ. ಈ ಘಟನೆ ಅಸಂಗಿ ಗ್ರಾಮದ ಪ್ರಜ್ವಲ್ ಜೆಂಟ್ಸ್ ಪಾರ್ಲರ್​ನಲ್ಲಿ ಈ ಘಟನೆ ನಡೆದಿದ್ದು, ಸಾಗರ ಎಂಬ ಯುವಕ ತಲೆಗೆ ಬಣ್ಣ ಹಚ್ಚಲು ಸಲೂನ್‌ಗೆ ಆಗಮಿಸಿದ್ದ ಎನ್ನಲಾಗಿದೆ. ಸಲೂನ್ ಮಾಲೀಕ ಲಕ್ಷ್ಮಣ ಬಣ್ಣ ಹಚ್ಚಲು ಮುಂದಾಗಿದ್ದ ವೇಳೆ ಪಕ್ಕದ ಟೇಬಲ್​ನಲ್ಲಿ ಸದಾಶಿವ ನಾವಿ ಎಂಬ ಕ್ಷೌರಿಕ ಬೇರೊಬ್ಬನ ಕಟಿಂಗ್ ಮಾಡುತ್ತಿದ್ದ.

ಕಲರ್ ಹಚ್ಚಲು  29 ರೂಪಾಯಿ ಕೊಡುವುದಾಗಿ ಲಕ್ಷ್ಮಣನಿಗೆ ಸಾಗರ ಹೇಳಿದ್ದ. ಇದಕ್ಕೆ ತಕರಾರು ತೆಗದ ಸದಾಶಿವ ನಾವಿ ಜಗಳಕ್ಕೆ ಇಳಿದಿದ್ದ. ಈ ಹಿಂದೆ ಸದಾಶಿವ ನಾವಿಯನ್ನು ಸಾಗರ ರೇಗಿಸುತ್ತಿದ್ದನಂತೆ. ಹೀಗಾಗಿ ಈ ಬಾರಿ ಈತ ಸಾಗರ ಜೊತೆ ಜಗಳಕ್ಕೆ ಇಳಿದಿದ್ದ ಎಂದು ಹೇಳಲಾಗಿದೆ. ಇಬ್ಬರ ಜಗಳ ತಾರಕಕ್ಕೇರಿದಾಗ ತಾಳ್ಮೆ ಕಳೆದುಕೊಂಡ ಸದಾಶಿವ ಕತ್ತರಿಯಿಂದ ಸಾಗರನ ಎದೆಯ ಎಡಭಾಗಕ್ಕೆ ಚುಚ್ಚಿದ್ದಾನೆ. ಕೂಡಲೆ ಸಾಗರನನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದಾಶಿವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement