ಬೆಳಗಾವಿ: ಕಾರು-ಲಾರಿ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು

ಬೆಳಗಾವಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಶುಕ್ರವಾರ ಬೆಳಗ್ಗೆ ನಡೆದ ಬಗ್ಗೆ ವರದಿಯಾಗಿದೆ.

ಡಿಕ್ಕಿ ಹೊಡೆದ  ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ನಿಪ್ಪಾಣಿ ನಗರದವರು ಎಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ. ಮೃತರನ್ನು ನಿಪ್ಪಾಣಿಯ ಅದಗೊಂಡ ಬಾಬು ಪಾಟೀಲ (60), ಛಾಯಾ ಅದಗೊಂಡ ಪಾಟೀಲ (55), ಮಹಾರಾಷ್ಟ್ರದ ರಾಧಾ ನಗರದ ಚಂಪಾತಾಯಿ ಮಗದುಮ್ಮ (85) ಮತ್ತು ಮಹೇಶ ದೇವಗೊಂಡ ಪಾಟೀಲ (28) ಎಂದು ಗುರುತಿಸಲಾಗಿದೆ ಎಂದು ನಿಪ್ಪಾಣಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಇವರೆಲ್ಲರೂ ಸಂಬಂಧಿಕರ ಮದುವೆಗೆ ಹೋಗುತ್ತಿದ್ದರು. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೆಸಿಬಿಯಿಂದ ಕಾರನ್ನು ತೆರವುಗೊಳಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement