ವಂದಿತಾ ಶರ್ಮಾ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮೇ 31ರಂದು ನಿವೃತ್ತರಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ಪಂಜಾಬ್ ಮೂಲದ ವಂದಿತಾ ಶರ್ಮಾ ಅವರು ಕರ್ನಾಟಕದ 39ನೇ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಅಲ್ಲದೆ, ಥೆರೇಸಾ ಭಟ್ಟಾಚಾರ್ಯ (2000), ಮಾಲತಿ ದಾಸ್ (2006) ಮತ್ತು ಕೆ ರತ್ನ ಪ್ರಭಾ (2017) ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ನಾಲ್ಕನೇ ಮಹಿಳೆಯಾಗಿದ್ದಾರೆ.
ತಮ್ಮ 36 ವರ್ಷಗಳ ವೃತ್ತಿ ಜೀವನದಲ್ಲಿ ವಂದಿತಾ ಹಲವಾರು ಸ್ಥಾನಗಳನ್ನು ಅಲಂಕರಿಸಿದ್ದಾರೆ. ಕಳೆದ ವರ್ಷ, ರಾಜ್ಯದಲ್ಲಿ ಕೋವಿಡ್ -19 ಲಸಿಕೆಯನ್ನು ಮೇಲ್ವಿಚಾರಣೆ ಮಾಡಲು ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಯಿತು. ಅವರು ಕೇಂದ್ರದಲ್ಲಿ ಬಾಹ್ಯಾಕಾಶ ಇಲಾಖೆಯೊಂದಿಗೆ ಕೆಲಸ ಮಾಡಿದರು.
1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಈಗ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್‌ ವರೆಗೆ ಅಧಿಕಾರದ ಅವಧಿ ಇರಲಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement