ಎಸ್‌ಡಿಪಿಐ, ಪಿಎಫ್‌‌ಐ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು: ಪ್ರಹ್ಲಾದ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಎಸ್‌ಡಿಪಿಐ ಸಂಘಟನೆಯ ಹಿಂದೆ ಕಾಂಗ್ರೆಸ್ ನಾಯಕರ ಬೆಂಬಲವಿದ್ದು, ಈ ಸಂಘಟನೆ ಕಾಂಗ್ರೆಸ್ ಬೆಳೆಸಿದ ಕೂಸು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಡಿಪಿಐ, ಪಿಎಫ್‌‌ಐ ಸಂಘಟನೆಗಳನ್ನು ಕಾಂಗ್ರೆಸ್, ಎಡಪಕ್ಷದವರು ಬೆಳೆಸಿದ್ದಾರೆ. ಈ ಸಂಘಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ಇದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ವಜಾ ಮಾಡಿದ್ದರು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆರ್‌ಎಸ್‌ಎಸ್ ಮೂಲ ಪ್ರಶ್ನಿಸಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಆರ್‌ಎಸ್‌ಎಸ್ ಮೂಲ, ಬಿಜೆಪಿ ಮೂಲವನ್ನು ಕೇಳುವ ಸಿದ್ದರಾಮಯ್ಯನವರ ಮೂಲವನ್ನೇ ಜನ ಕಿತ್ತುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

ನಿಮ್ಮ ಕಾಮೆಂಟ್ ಬರೆಯಿರಿ

advertisement