ಅಂಕೋಲಾ: ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕಿನಲ್ಲಿ ತೆರಳುತ್ತಿದ್ದ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲ ಬೊಗ್ರಿಬೈಲ್ ಸಮೀಪ ಸಂಭವಿಸಿದ ಬಗ್ಗೆ ವರದಿಯಾಗಿದೆ.
ಮೃತರನ್ನು ಅಗಸೂರಿನ ಬೊಮ್ಮಯ್ಯ ನಾಯಕ ಮತ್ತು ನಾರಾಯಣ ನಾಯಕ ಎಂದು ಗುರುತಿಸಲಾಗಿದೆ. ಬೈಕ್ ಗೆ ಡಿಕ್ಕಿಯಾದ ಲಾರಿಯು ಬೈಕ್ ಸವಾರರನ್ನು ಸುಮಾರು ಕೆಲವು ಮೀಟರುಗಳಷ್ಟು ಎಳೆದುಕೊಂಡು ಹೋಗಿದೆ ಎನ್ನಲಾಗಿದೆ.
ಲಾರಿ ಚಾಲಕ ಲಾರಿಯನ್ನು ಅಪಘಾತ ಸ್ಥಳದ ಸಮೀಪ ಬಿಟ್ಟು ಪರಾರಿಯಾಗಿದ್ದು, ಅಂಕೋಲಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ