ರೆಸ್ಟೋರೆಂಟ್‌ಗಳು ಸೇವಾ ಶುಲ್ಕ ವಿಧಿಸುವುದು ಕಾನೂನುಬಾಹಿರ ಎಂದ ಸರ್ಕಾರ; ತಕ್ಷಣವೇ ನಿಲ್ಲಿಸಲು ಸೂಚನೆ

ನವದೆಹಲಿ: ಗುರುವಾರ ಗ್ರಾಹಕ ವ್ಯವಹಾರಗಳ ಸಚಿವಾಲಯವು ರೆಸ್ಟೋರೆಂಟ್‌ಗಳು ವಿಧಿಸುವ ಸೇವಾ ಶುಲ್ಕವನ್ನು ಕಾನೂನುಬಾಹಿರ ಎಂದು ಹೇಳಿದೆ ಮತ್ತು ಅದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್ ​​(NRAI) ಗೆ ಸೂಚಿಸಿದೆ. ಗ್ರಾಹಕರಿಗೆ ವಿಧಿಸುವ ಈ ಲೆವಿಗೆ ಯಾವುದೇ ಕಾನೂನು ಬೆಂಬಲ ಇಲ್ಲ ಎಂದು ಸಚಿವಾಲಯ ಹೇಳಿದೆ ಮತ್ತು ಮೂಲಗಳ ಪ್ರಕಾರ ಸರ್ಕಾರವು ಈ ಬಗ್ಗೆ … Continued

ಆರೋಗ್ಯ ಸಚಿವ ಸುಧಾಕರಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬುಧವಾರವಷ್ಟೇ ವಿದೇಶದಿಂದ ವಾಪಸ್ಸಾಗಿದ್ದ ಆರೋಗ್ಯ ಸಚಿವರು, ಕೋವಿಡ್​ ಟೆಸ್ಟ್​ಗೆ ಒಳಗಾಗಿದ್ದರು. ಅದರಂತೆ ಬಂದ ವರದಿಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ ಅವರು ಹೋಮ್ ಐಸೋಲೇಷನ್ ಆಗಿದ್ದಾರೆ. ಕೊರೋನಾ ಸೋಂಕು ತಗುಲಿದ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ ಅವರು, ‘ಮೂರು ಅಲೆಗಳ ಸಂದರ್ಭದಲ್ಲೂ … Continued

ಕಾಶ್ಮೀರದಲ್ಲಿ ಹಿಂದೂ ಮ್ಯಾನೇಜರ್‌ ಹತ್ಯೆಯಾದ ಕೆಲವೇ ಗಂಟೆಯಲ್ಲಿ ಮತ್ತೊಬ್ಬ ಹಿಂದೂ ಕಾರ್ಮಿಕನ ಹತ್ಯೆ : ಮೇ 1ರಿಂದ ಇದು 9ನೇ ಹತ್ಯೆ

ಕಾಶ್ಮೀರ: ಗುರುವಾರ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಬಿಹಾರ ವಲಸೆ ಕಾರ್ಮಿಕರೊಬ್ಬರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ, ಕುಲ್ಗಾಮ್ ಜಿಲ್ಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಒಬ್ಬರನ್ನುಕೊಂದ ಕೆಲವೇ ಗಂಟೆಗಳ ನಂತರ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ದಾಳಿಗೆ ತುತ್ತಾದ ಕಾರ್ಮಿಕರನ್ನು ದಿಲ್ಕುಶ್ ಕುಮಾರ್ ಮತ್ತು ಗುರಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರಿ ಅವರನ್ನು … Continued

ಜನಪ್ರಿಯ ಪಂಜಾಬಿ ಗಾಯಕ ಸಿಧು ಮೂಲೆವಾಲಾ ಹತ್ಯೆ ನಂತರ ಹಿಂಪಡೆದಿದ್ದ 424 ಜನರ ಭದ್ರತೆ ಮರುಸ್ಥಾಪಿಸಲು ಪಂಜಾಬ್ ಸರ್ಕಾರ ನಿರ್ಧಾರ

ಚಂಡಿಗಡ: ಪಂಜಾಬ್ ಸರ್ಕಾರವು ಗುರುವಾರ ರಾಜ್ಯದ ಎಲ್ಲಾ 424 ವ್ಯಕ್ತಿಗಳ ಭದ್ರತೆಯನ್ನು ಪುನಃಸ್ಥಾಪಿಸಲು ನಿರ್ಧರಿಸಿದೆ. ಅವರ ರಕ್ಷಣೆಯನ್ನು ಹಿಂಪಡೆಯಲಾಗಿತ್ತು. ಜನಪ್ರಿಯ ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಅವರ ಭದ್ರತೆಯನ್ನು ಎಎಪಿ ಸರ್ಕಾರ ಮೊಟಕುಗೊಳಿಸಿದ ನಂತರ ಮೋಸೆವಾಲಾ ಅವರು ಹಾಡಹಗಲೇ ಗುಂಡಿಕ್ಕಿ ಕೊಲ್ಲಲ್ಪಟ್ಟ ಕೆಲವು ದಿನಗಳ ನಂತರ ಈ ಬೆಳವಣಿಗೆಯು ನಡೆದಿದೆ. ಮುಚ್ಚಿದ … Continued

ಕಾಶ್ಮೀರದಲ್ಲಿ ಹಿಂದೂಗಳ ಟಾರ್ಗೆಟ್‌ ಹತ್ಯೆ: ಅಜಿತ್ ಅಜಿತ ದೋವಲ್ ಜೊತೆ ಅಮಿತ್ ಶಾ ಉನ್ನತ ಮಟ್ಟದ ಸಭೆ

ನವದೆಹಲಿ: ಕಾಶ್ಮೀರದಲ್ಲಿ ಹಿಂದೂಗಳನ್ನ ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಸರಣಿ ಮುಂದುವರೆದಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಜೊತೆ ಚರ್ಚಿಸಿದರು. ಪ್ರಧಾನಿ ಕಾರ್ಯಾಲಯದ ಕೇಂದ್ರದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು. ಮೂರು ದಿನಗಳಲ್ಲಿ ಕಣಿವೆಯಲ್ಲಿ ಹಿಂದೂಗಳ ಮೇಲಿನ ಎರಡನೇ … Continued

ಕರ್ನಾಟಕದಲ್ಲಿ ಕೊರೋನಾ ದಿಢೀರ್ ಹೆಚ್ಚಳ: ಗುರುವಾರ 297 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ (ಗುರುವಾರ) 297 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ ಇಂದು ಕೊರೊನಾದಿಂದ ಸಾವು ವರದಿಯಾಗಿಲ್ಲ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,952,577ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು,ಗುರುವಾರ 276 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,788,151ಕ್ಕೆ … Continued

ಕಾಶ್ಮೀರ ಕಣಿವೆಯ ಕಾಶ್ಮೀರಿ ಹಿಂದೂ ಸರ್ಕಾರಿ ನೌಕರರನ್ನು ಜೂನ್ 6ರೊಳಗೆ ‘ಸುರಕ್ಷಿತ ಸ್ಥಳಗಳಿಗೆ’ ಪೋಸ್ಟ್ ಮಾಡಲು ಎಲ್‌ಜಿ ಮನೋಜ್ ಸಿನ್ಹಾ ಆದೇಶ: ವರದಿ

ಕಾಶ್ಮೀರ: ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಗಳು ಹೆಚ್ಚಾದ ನಂತರ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೂನ್ 6ರೊಳಗೆ ಕಾಶ್ಮೀರದ ಅಲ್ಪಸಂಖ್ಯಾತ ಸಮುದಾಯಗಳ ಪಿಎಂ ಪ್ಯಾಕೇಜ್ ನೌಕರರು ಮತ್ತು ಇತರ ಸದಸ್ಯರನ್ನು ಸುರಕ್ಷಿತ ಸ್ಥಳಗಳಲ್ಲಿ ನಿಯೋಜಿಸಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಮೇ 31ರಂದು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಹಿಂದೂ … Continued

ಟಾರ್ಗೆಟ್‌ ಹತ್ಯೆಗಳ ಹೆಚ್ಚಳದ ಮಧ್ಯೆ ಕಾಶ್ಮೀರ ಕಣಿವೆ ತೊರೆಯುತ್ತಿರುವ ಹಿಂದೂಗಳು: ವರದಿ

ಕಾಶ್ಮೀರ: ಟಾರ್ಗೆಟ್‌ ಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರಿ ಪಂಡಿತರು ಸೇರಿದಂತೆ ಕಾಶ್ಮೀರದಲ್ಲಿ ವಾಸಿಸುವ ಹಿಂದೂಗಳು ಕಣಿವೆಯನ್ನು ತೊರೆಯುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ. ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ (ಜೂನ್ 2) ರಾಜಸ್ಥಾನದ ಬ್ಯಾಂಕ್ ಉದ್ಯೋಗಿಯನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಮೇ 1ರಿಂದ ಕಣಿವೆಯಲ್ಲಿ ನಡೆದ ಎಂಟನೇ ಟಾರ್ಗೆಟ್‌ ಹತ್ಯೆಯಾಗಿದ್ದು, ಮತ್ತು ಮುಸ್ಲಿಮೇತರ ಸರ್ಕಾರಿ ನೌಕರರ … Continued

ಗುಜರಾತ್‌ : ಕಾಂಗ್ರೆಸ್‌ ತೊರೆದ ಹಾರ್ದಿಕ್ ಪಟೇಲ್ ಈಗ ಬಿಜೆಪಿಗೆ ಸೇರ್ಪಡೆ

ಗಾಂಧಿನಗರ (ಗುಜರಾತ್): ಕಳೆದ ತಿಂಗಳು ಕಾಂಗ್ರೆಸ್‌ ಪಕ್ಷವನ್ನು ತೊರೆದಿದ್ದ ಹಾರ್ದಿಕ್ ಪಟೇಲ್ ಇಂದು, ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗುಜರಾತ್​ನಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ಇಂತಹ ವೇಳೆ ಅವರು ಕಾಂಗ್ರೆಸ್‌ ಬಿಟ್ಟು ಕಮಲ ಹಿಡಿದಿದ್ದಾರೆ. ಗಾಂಧಿನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು … Continued

ಮೈಕ್‌ನಲ್ಲಿ ಆಜಾನ್: ಜೂನ್‌ 8ರಂದು ರಾಜ್ಯದ ಬಿಜೆಪಿ ಶಾಸಕರ ಕಚೇರಿ ಮುಂದೆ ಪ್ರತಿಭಟನೆ

ಹುಬ್ಬಳ್ಳಿ: ಮಸೀದಿಗಳಲ್ಲಿ ಅಳವಡಿಸಲಾಗಿರುವ ಮೈಕ್‍ಗಳನ್ನು ತೆರವುಗೊಳಿಸದ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮರ ಸಾರಿದ್ದು, ತೆರವು ಮಾಡದಿರುವುದನ್ನು ಖಂಡಿಸಿ ಜೂ.8 ರಂದು ರಾಜ್ಯದ ಎಲ್ಲಾ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಸೀದಿಗಳ ಮೇಲೆ ಅಳವಡಿಸಲಾಗಿರುವ ಮೈಕ್ … Continued