ಆರೋಗ್ಯ ಸಚಿವ ಸುಧಾಕರಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬುಧವಾರವಷ್ಟೇ ವಿದೇಶದಿಂದ ವಾಪಸ್ಸಾಗಿದ್ದ ಆರೋಗ್ಯ ಸಚಿವರು, ಕೋವಿಡ್​ ಟೆಸ್ಟ್​ಗೆ ಒಳಗಾಗಿದ್ದರು. ಅದರಂತೆ ಬಂದ ವರದಿಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ ಅವರು ಹೋಮ್ ಐಸೋಲೇಷನ್ ಆಗಿದ್ದಾರೆ.

ಕೊರೋನಾ ಸೋಂಕು ತಗುಲಿದ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ ಅವರು, ‘ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್​ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement