ಕನ್ನಡ ನಟ, ನಿರ್ದೇಶಕ ಯೋಗರಾಜ ಭಟ್ ಮಾವ ಸತ್ಯನಾರಾಯಣ ಉಮ್ಮತ್ತಾಲ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡ ಸಿನಿಮಾ ರಂಗದ ನಟ ಹಾಗೂ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರ ಮಾವ ಸತ್ಯನಾರಾಯಣ ಉಮ್ಮತ್ತಾಲ್ (70) ಇಂದು, ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸತ್ಯನಾರಾಯಣ ಉಮ್ಮತ್ತಾಲ್ ಅವರು ಯೋಗರಾಜ್ ಭಟ್ ಅವರ ಪತ್ನಿಯ ತಂದೆ, ಅವರು ಭಟ್ಟರ ಬೆಂಗಳೂರಿನ ಮನೆಯಲ್ಲೇ ವಾಸವಿದ್ದರು.

ಪವನಕುಮಾರ್ ನಿರ್ದೇಶನದ ಲೈಫು ಇಷ್ಟೇನೇ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸತ್ಯ ಅವರು ಇಪ್ಪತ್ತೈದಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹನಟರಾಗಿ ನಟಿಸಿದ್ದಾರೆ. ಅವರು ಗಣೇಶ್, ದುನಿಯಾ ವಿಜಯ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಹೆಸರಾಂತ ನಟರ ಜೊತೆ ತೆರೆಹಂಚಿಕೊಂಡಿದ್ದರು.
ಯೋಗರಾಜ್ ಭಟ್ ನಿರ್ದೇಶನದ ಬಹುತೇಕ ಸಿನಿಮಾಗಳಲ್ಲೂ ಸತ್ಯ ಕಾಣಿಸಿಕೊಂಡಿದ್ದರು. ಜಯಮ್ಮನ ಮಗ, ಕೆಂಡಸಂಪಿಗೆ, ಕಡ್ಡಿಪುಡಿ, ದನಕಾಯೋನು, ಮುಗುಳು ನಗೆ’, ‘ಪಂಚತಂತ್ರ’, ‘Act 1978’, ಪ್ರೀತಿ ಗೀತಿ ಸೇರಿದಂತೆ ಅನೇಕ ಸಿನೆಮಾಗಳಲ್ಲಿ ಸತ್ಯನಾರಾಯಣ ನಟಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement