ಕೊಪ್ಪಳ: ಕೊಪ್ಪಳ ಜಿಲ್ಲಾದ್ಯಂತ ಭಾನುವಾರ ಗುಡುಗು- ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಸಿಡಿಲಿಗೆ ರೈತ ಮಹಿಳೆಯರಿಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ದೇವಮ್ಮ (55) ಮತ್ತು ರೇಷ್ಮಾ (27) ಎಂದು ಗುರುತಿಸಲಾಗಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿಯಲ್ಲಿ ಮಹಿಳೆಯರಿಬ್ಬರು ಭಾನುವಾರ ಹೊಲದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಳೆ ಬಂದ ಕಾರಣ ಆಶ್ರಯಕ್ಕಾಗಿ ಮರದ ಕೆಳಗೆ ನಿಂತಿದ್ದರು, ಈ ವೇಳೆ ಮರಕ್ಕೆ ಸಿಡಿಲು ಬಡಿದಿದೆ. ಆ ವೇಳೆ ಮರದ ಕೆಳಗೆ ನಿಂತಿದ್ದ ಇವರಿಗೂ ಸಿಡಲು ಬಡಿದಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಮೂವರು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ